News Karnataka Kannada
Wednesday, May 08 2024
ಹುಬ್ಬಳ್ಳಿ-ಧಾರವಾಡ

ಕಾಂಗ್ರೆಸ್ಸಿನ ತುಷ್ಟಿಕರಣ ರಾಜಕರಣಕ್ಕೆ ಮುಸ್ಲಿಂರನ್ನು ಬಳಸಿಕೊಳ್ಳುತ್ತಿದ್ದಾರೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Attack on BSY's house may also be politically motivated: Prahlad Joshi
Photo Credit :

ಹುಬ್ಬಳ್ಳಿ: ಕಾಂಗ್ರೆಸ್ಸಿನ ತುಷ್ಟಿಕರಣ ರಾಜಕರಣಕ್ಕೆ ಮುಸ್ಲಿಂ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ಆದರಿಂದ ಮುಸ್ಲಿಂ ಸಮುದಾಯದವರು ಯಾವುದೇ ಕಾರಣಕ್ಕೂ ಅವರ ಮಾತು ಕೇಳಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ತೃಷ್ಟಕರಣ ರಾಜಕೀಯ ಮಾಡಿ ದೇಶವನ್ನು ಇಬ್ಭಾಗ ಮಾಡಿದ್ದಾರೆ. ಈಗ ಮತ್ತೇ ದೇಶವನ್ನು ಒಡದಾಳಲು ಹಿಜಾಬ ಬಳಸಿಕೊಳ್ಳುತ್ತಿದ್ದಾರೆ ಎಂದರು.

ಕಾಂಗ್ರೆಸ್ ತನ್ನ ರಾಜಕಾರಣಕ್ಕೆ ಮುಸ್ಲಿಂರನ್ನು ಬಳಸಿಕೊಳ್ಳುತ್ತಿದೆ. ದೊಡ್ಡ ಪ್ರಮಾಣದಲ್ಲಿ ಕುಮ್ಮಕ್ಕು ನೀಡುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಹಿಜಾಬ್ ಗಲಾಟೆ ಆಗಬಾರದಿತ್ತು. ಇದು ಕೆಟ್ಟ ಸಂಗತಿ. ಹಿಜಾಬ್ ವಿಚಾರದಲ್ಲಿ ಯಾರೇ ಶಾಲೆ-ಕಾಲೇಜು ವಿರುದ್ಧ ಪ್ರತಿಭಟನೆ ಮಾಡಿದರು ಅಂಥವರನ್ನು ಬಂಧಿಸಿ ಕ್ರಮ ಕೈಕೊಳ್ಳಲಿ. ವಸ್ತ್ರ ಸಂಹಿತೆ ಪೋಲಿಸ್, ಮಿಲಿಟರಿ, ವೈದ್ಯರು‌ ಸೇರಿದಂತೆ ಎಲ್ಲಾ ವರ್ಗಕ್ಕೂ ವಸ್ತ್ರ ಸಂಹಿತೆ ಇರುತ್ತದೆ. ಅದನ್ನು ಪಾಲನೆ ಮಾಡಬೇಕು. ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ.‌ ಇದಕ್ಕೆ ಕಾಂಗ್ರೆಸ್ ನಿಲುವೇನು? ಸದನದಲ್ಲಿ ಹಿಜಾಬ್ ವಿಚಾರದಲ್ಲಿ ತನ್ನ ನಿಲುವು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.

ಶಾಸಕ ಜಮೀರ್ ಅಹ್ಮದ್ ಖಾನ ಹೇಳಿಕೆ ಚಿಲ್ಲರೆ ಹೇಳಿಕೆ‌.‌ ಇದು ಅತ್ಯಂತ ಕೀಳುಮಟ್ಟದ ಹೇಳಿಕೆ. ಒಬ್ಬ ಶಾಸಕನಾಗಿ ಕೀಳುಮಟ್ಟದ ಹೇಳಿಕೆ ನೀಡಬಾರದು ಎಂದು ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು