ಧಾರವಾಡ : ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್. ಮೋರೆ(84) ಅವರು ಇಂದು ಮುಂಜಾನೆ ಅನಾರೋಗ್ಯದ ಹಿನ್ನೆಲೆ ಧಾರವಾಡದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆ ಎಸ್.ಆರ್ ಮೋರೆ ಅವರನ್ನು ಧಾರವಾಡದ ಎಸ್.ಡಿ.ಎಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪ, ಧರ್ಮಸಿಂಗ್ ಅವಧಿಯಲ್ಲಿ ಎರಡು ಬಾರಿ ಸಚಿವರಾಗಿ ಅಧಿಕಾರವನ್ನು ಮಾಡಿದ್ದರು.
ಇಂದೇ ಅವರ ಹುಟ್ಟುಹಬ್ಬವಿತ್ತು. ಇಂದೇ ಅವರು ಮೃತರಾಗಿರುವುದು ದುರ್ದೈವ. ಮೋರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ