ಹುಬ್ಬಳ್ಳಿ: ರಾಷ್ಟ್ರೀಯ ಸಯಂಸೇವಕ ಸಂಘದ ವಿರುದ್ಧ ರಾಜಕೀಯ ಉದ್ದೇಶಕ್ಕಾಗಿ ಟೀಕೆಗಳನ್ನು ಮಾಡುತ್ತ ಬಂದ ಕಾಂಗ್ರೆಸ್ ದೇಶದ್ಯಾಂತ ಅಧಿಕಾರ ಕಳೆದುಕೊಂಡಿದೆ. ಸಿದ್ದರಾಮಯ್ಯ ರಾಜ್ಯದಲ್ಲೂ ಅದನ್ನೇ ಮುಂದುವರಿಸಿದ್ದು, ಕರ್ನಾಟಕದಲ್ಲೂ ಅದೇ ಗತಿ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 75 ವರ್ಷದಿಂದ ಆರೆಸ್ಸೆಸ್ ದೇಶಭಕ್ತಿ ಮತ್ತು ಜನರ ಸೇವೆ ಮಾಡಿಕೊಂಡು ಬಂದಿದೆ. ಅನಾಹುತಗಳಾದಾಗ, ಜನ ಸಂಕಷ್ಟದಲ್ಲಿದ್ದಾಗ, ಸರ್ಕಾರವೂ ಗಮನ ಹರಿಸದಿದ್ದಾಗ ಆರೆಸ್ಸೆಸ್ ಸ್ಪಂದಿಸಿದೆ. ಕಾಂಗ್ರೆಸ್ನವರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸಂಘವನ್ನು ಟೀಕಿಸುತ್ತಿದ್ದಾರೆ ಎಂದರು.
ಪಠ್ಯ ಪುಸಕ್ತದ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಶಿಕ್ಷಣ ಸಚಿವರು ಈಗಾಗಲೇ ಆ ಕುರಿತು ಉತ್ತರ ಕೊಟ್ಟಿದ್ದಾರೆ ಎಂದರು.
ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ವಿಚಾರದ ಕುರಿತು ಗೊತ್ತಾಗಬೇಕಾದರೆ ಜೂನ್ 10ರವರೆಗೆ ಕಾಯಿರಿ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.