News Karnataka Kannada
Sunday, May 05 2024
ಹುಬ್ಬಳ್ಳಿ-ಧಾರವಾಡ

ಕಾಂಗ್ರೆಸ್ ವಿರೋಧಿಸಿ ಬಿಜೆಪಿ ವತಿಯಿಂದ ರಾಜದ್ಯಾಂತ ಫೆ. 27 ಮತ್ತು 28  ರಂದು ಬೃಹತ್ ಪ್ರತಿಭಟನೆ

Mahesh Tengina Kai
Photo Credit :

ಹುಬ್ಬಳ್ಳಿ: ಸದನದಲ್ಲಿ ಜನಸಾಮಾನ್ಯರ ಅಭಿವೃದ್ಧಿ ಕಾರ್ಯ ಮಾಡಲು ಸಲಹೆ ಸೂಚನೆ ನೀಡಬೇಕಾದ‌ ವಿರೋಧ ಪಕ್ಷ ಇಲ್ಲಸಲ್ಲದ ಕಾರಣಗಳಿಂದ ಕಲಾಪ ಹಾಳು ಮಾಡುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿ ವತಿಯಿಂದ ರಾಜದ್ಯಾಂತ ಫೆ. 27 ಮತ್ತು 28  ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷವಾದ ಕಾಂಗ್ರೆಸ್ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಕ್ಷುಲಕ ಕಾರಣಕ್ಕೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಿ ಜನರ ಹಾದಿ ತಪ್ಪಿಸುತ್ತಿದೆ.

ನಗರದ ನಕ್ಸಲ್, ಭಯೋತ್ಪಾದಕರ, ಉಗ್ರವಾದಿಗಳ ಪರವಿರುವ ಕಾಂಗ್ರೆಸ್ ನಡೆ ಖಂಡಿಸಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದರು.

ಎಸ್.ಡಿ.ಪಿ.ಐ. ಮತ್ತು ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸವಂತೆ ಸಿಎಂ ಅವರಿಗೆ ಈಗಾಗಲೇ ಒತ್ತಾಯಿಸಿದ್ದೇವೆ. ಸದ್ಯದಲ್ಲೇ ಸಿಎಂ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ವಿಪ ಸದಸ್ಯ ಪ್ರದೀಪ ಶೆಟ್ಟರ, ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಹುಡಾ ಅಧ್ಯಕ್ಷ ನಾಗೇಶ ಕಲಬುರಗಿ, ಜಿಲ್ಲಾಧ್ಯಕ್ಷ ಸಂಜಯ ಕಪಟ್ಕರ್ ಮತ್ತು ರವಿ ನಾಯಕ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು