ಕುಮಾರಸ್ವಾಮಿ ಸೂಟ್ ಕೇಸ್ ರಾಜಕಾರಣ ಮಾಡುತ್ತಿದ್ದಾರೆ : ಶಾಸಕ ಜಮೀರ್ ಅಹ್ಮದ್

ಹುಬ್ಬಳ್ಳಿ ; ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಶಾಸಕ ಜಮೀರ್ ಅಹ್ಮದ್, ಕುಮಾರಸ್ವಾಮಿ ಸೂಟ್ ಕೇಸ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಾನಗಲ್ ನಲ್ಲಿ ಕುಮಾರಸ್ವಾಮಿ ಕೇವಲ ಒಂದು ದಿನ ಮಾತ್ರ ಚುನಾವಣಾ ಪ್ರಚಾರ ಮಾಡಿದ್ದಾರೆ. ಕಾರಣ ಅವರಿಗೆ ಹಾನಗಲ್ ನಿಂದ ಕಡಿಮೆ ಹಣ ಬಂದಿರಬೇಕು. ಹಾಗಾಗಿ ಒಂದೇ ದಿನದಲ್ಲಿ ಪ್ರಚಾರ ಮುಗಿಸಿದ್ದಾರೆ ಎಂದರು.

ಕುಮಾರಸ್ವಾಮಿ ಸೂಟ್ ಕೇಸ್ ರಾಜಕಾರಣ ಮಾಡುತ್ತಿದ್ದಾರೆ. ಕನಿಷ್ಠ 3-4 ದಿನಗಳಾದರೂ ಹಾನಗಲ್ ನಲ್ಲಿ ಚುನಾವಣಾ ಪ್ರಚಾರ ನಡೆಸಬೇಕಿದ್ದ ಕುಮಾರಸ್ವಾಮಿ ಕೇವಲ ಒಂದು ದಿನ ಪ್ರಚಾರ ಮಾಡಿದ್ದಾರೆ. ಹಾನಗಲ್ ನಿಂದ ಕಡಿಮೆ ಹಣ ಬಂದಿರಬೇಕು. ಇದೇ ರೀತಿ ಆದರೆ ಹಾನಗಲ್ ಜೆಡಿಎಸ್ ಅಭ್ಯರ್ಥಿ ಬೀದಿಗೆ ಬೀಳ್ತಾರೆ ಎಂದು ವಾಗ್ದಾಳಿ ನಡೆಸಿದರು.

20-20 ಸರ್ಕಾರ ರಚನೆ ವೇಳೆ ಯಡಿಯೂರಪ್ಪಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ಕುಮಾರಸ್ವಾಮಿಗೆ ಹೇಳಿದ್ದೆ. ಆದರೆ ಹೆಚ್.ಡಿ.ರೇವಣ್ಣ ಡಿಸಿಎಂ ಆಗುತ್ತಾರೆಂಬ ಕಾರಣಕ್ಕೆ ಕುಮಾರಸ್ವಾಮಿ ಬಿಎಸ್ ವೈಗೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ. ಕುಮಾರಸ್ವಾಮಿಯವರು ಅಲ್ಪಸಂಖ್ಯಾತರನ್ನು ಮಾತ್ರವಲ್ಲ, ಒಕ್ಕಲಿಗರನ್ನೂ ಮುಗಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಉಪಚುನಾವಣೆ ಬಂದಾಗ ಮಾತ್ರ ಕುಮಾರಸ್ವಾಮಿಯವರಿಗೆ ಅಲ್ಪಸಂಖ್ಯಾತರ ನೆನಪಾಗುತ್ತದೆ. ನಿಜವಾಗಿ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ದರೆ ರಾಮನಗರ, ಮಂಡ್ಯದಲ್ಲಿಯೂ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡಲಿ ಎಂದು ಸವಾಲು ಹಾಕಿದರು. ನನಗೆ ರಾಜಕೀಯ ಗುರು ಎಂದರೆ ಹೆಚ್.ಡಿ.ದೇವೇಗೌಡರು ಹಾಗೂ ಸಿದ್ದರಾಮಯ್ಯ, ಸಿದ್ದರಾಮಯ್ಯ ಯಾವುದೇ ಜಾತಿ ಮತ ನೋಡಲ್ಲ. ನಾನು ಕಾಂಗ್ರೆಸ್ ಗೆ ಬಂದ ಮೇಲೆ ಸಿದ್ದರಾಮಯ್ಯ ನನಗೆ ನಾಲ್ಕು ಖಾತೆಗಳ ಜವಾಬ್ದಾರಿ ಕೊಟ್ಟಿದ್ದರು. ಆದರೆ ಜೆಡಿಎಸ್ ನಲ್ಲಿ ಕುಮಾರಸ್ವಾಮಿ ಕೇವಲ ಹಜ್ ಹಾಗೂ ವಕ್ಫ್ ಖಾತೆ ಮಾತ್ರ ನೀಡಿದ್ದರು. ಇದು ಕುಮಾರಸ್ವಾಮಿ ನಮ್ಮನ್ನು ನೋಡುವ ರೀತಿ ಎಂದು ಗುಡುಗಿದರು.

Gayathri SG

Recent Posts

“ಕಾರು ಅಪಘಾತದಲ್ಲಿ ಮೃತಪಟ್ಟಿಲ್ಲ ಕಿರುತೆರೆ ನಟಿ ಪವಿತ್ರಾ”

ಕಿರುತೆರೆ ಪವಿತ್ರಾ ಕಾರು ಅಪಘಾತದಲ್ಲಿ ಮೃತಪಟ್ಟೇ ಇಲ್ಲ ಎಂದು ಗೆಳೆಯ ಚಂದು ಅವರು ಹೇಳಿದ್ದಾರೆ. ಅಲ್ಲಿ ನಡೆದಿದ್ದು ಏನು ಎಂಬುದನ್ನು…

16 mins ago

ಥಾಯ್ಲೆಂಡ್‌ ಓಪನ್‌ ಟೂರ್ನಿ : ಗೆಲುವಿನ ಭರವಸೆಯಲ್ಲಿ ಸಾತ್ವಿಕ್-ಚಿರಾಗ್ ಜೋಡಿ

ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಪಂದ್ಯಾವಳಿ ಇಂದು(ಮಂಗಳವಾರ) ಆರಂಭಗೊಳ್ಳಲಿದ್ದು ಲಕ್ಷ್ಯ ಸೇನ್‌ ಮತ್ತು ಪಿ.ವಿ. ಸಿಂಧು ಟೂರ್ನಿಯಿಂದ ಹಿಂದೆ…

21 mins ago

12 ರಾಜ್ಯದ ಸಿಎಂಗಳ ಸಮ್ಮುಖದಲ್ಲಿ ಇಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ಇಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಈ ವೇಳೆ…

38 mins ago

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್‌ಇಂಡೀಸ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನೊಂದಿಗೆ ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್ ದ್ರಾವಿಡ್…

1 hour ago

ಕೋಲ್ಕತ್ತಾ-ಗುಜರಾತ್‌ ಪಂದ್ಯ ರದ್ದು : ಟೂರ್ನಿಯಿಂದ ಹೊರಬಿದ್ದ​ ಟೈಟಾನ್ಸ್​ ಪಡೆ

: ಕೆಕೆಆರ್​ ವಿರುದ್ಧದ ಸೋಮವಾರದ ಐಪಿಎಲ್​ ಪಂದ್ಯ ರದ್ದು ಗೊಂಡ ಕಾರಣ ಶುಭಮನ್​ ಗಿಲ್​ ಸಾರಥ್ಯದ ಗುಜರಾತ್​ ಟೈಟಾನ್ಸ್​ ತಂಡ…

1 hour ago

ಕೋವಿಡ್ ಹೊಸ ರೂಪಾಂತರಿ ಪತ್ತೆ : 91 ಪ್ರಕರಣ ದಾಖಲು

ಈಗಾಗಲೇ ಒಂದು ಬಾರಿ ಜನ ಜೀವನವನ್ನು ಅಲ್ಲೋಲಾ ಕಲ್ಲೊಲಾ ಮಾಡಿದ್ದ ಕೊರೊನಾ ಮಾರಿ ಇದೀಗ ಮತ್ತೆ ಒಂದು ಹೊಸ ರೂಪದಲ್ಲಿ…

2 hours ago