News Karnataka Kannada
Saturday, May 04 2024
ಹುಬ್ಬಳ್ಳಿ-ಧಾರವಾಡ

ಕೆ.ಎಸ್. ಈಶ್ವರಪ್ಪ ರಾಜೀನಾಮೆಯಿಂದ ಸರ್ಕಾರಕ್ಕೆ ಯಾವುದೇ ರೀತಿ ಮುಜುಗರವಿಲ್ಲ: ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ
Photo Credit :

 ಹುಬ್ಬಳ್ಳಿ:  ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಯಿಂದ ಸರ್ಕಾರಕ್ಕೆ ಯಾವುದೇ ರೀತಿ ಮುಜುಗರ ಮತ್ತು ಹಿನ್ನಡೆಯಾಗುವುದಿಲ್ಲ. ತನಿಖೆಯಿಂದ ಎಲ್ಲ ಸತ್ಯಾಂಶ ಹೊರಬರುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ ಪಾಟೀಲ ಅವರ ಆತ್ಮಹತ್ಯೆ ಕುರಿತು ತನಿಖೆ ನಡೆದಿದೆ. ತನಿಖೆಯಿಂದ ಎಲ್ಲ ಗೊತ್ತಾಗುತ್ತದೆ. ಸ್ವತಃ ಈಶ್ವರಪ್ಪ ನನ್ನೊಂದಿಗೆ ಮಾತನಾಡಿ ತನಿಖೆ ಆದಷ್ಟು ಬೇಗ ಮಾಡಲು ತಿಳಿಸಿದ್ದು, ಈ ಆರೋಪದಿಂದ ಮುಕ್ತನಾಗುತ್ತೇನೆ ಎಂದು ವಿಶ್ವಾಸವಿದೆ ಎಂದು ತಿಳಿಸಿದ್ದಾರೆ ಎಂದರು.

ತನಿಖೆ ಆರಂಭವಾಗಿದೆ. ಪೊಲೀಸರಿಗೆ ಕೆಲಸವನ್ನು ಮಾಡಲು ಬಿಡಬೇಕು. ಕಾಂಗ್ರೆಸ್ ನಾಯಕ ಜಾರ್ಜ್ ಅವರನ್ನು ಪೊಲೀಸರು ಮತ್ತು ಸಿಬಿಐ ಅಧಿಕಾರಿಗಳು ಬಂಧಿಸಿದ್ದರಾ? ಇಲ್ಲ. ಪೊಲೀಸರು ತನಿಖೆಗೆ ಏನು ಅವಶ್ಯಕತೆ ಇದೆ ಅದನ್ನು ಅವರೇ ತೀರ್ಮಾನ ಮಾಡುತ್ತಾರೆ. ಇವರೇ ತನಿಖೆ ಅಧಿಕಾರಿಗಳು, ನ್ಯಾಧೀಶರಾಗಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕರು ಈಶ್ವರಪ್ಪ ಅವರ ಬಂಧಿಸಬೇಕು ಎಂಬ ಮಾತಿಗೆ ಪ್ರತಿಕ್ರಿಯೆ ನೀಡಿದರು.

ತನಿಖೆಯಿಂದ ಎಲ್ಲ ಗೊತ್ತಾಗಲಿದೆ. ಅವಾಗ ಸರ್ಕಾರಕ್ಕೆ ಹಿನ್ನಡೆಯೋ ಮುನ್ನಡೆಯೋ ತಿಳಿಯುತ್ತದೆ. ಯಾಕೆ ಕಾಂಗ್ರೆಸ್ ನಾಯಕರಿಗೆ ಆತಂಕ ಎಂದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು