ಹುಬ್ಬಳ್ಳಿ : ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸೋಮವಾರದ ಸಂತೆಯಲ್ಲಿ ತರಕಾರಿ ಬೆಲೆ ಕಳೆದ ವಾರಕ್ಕಿಂತ ದುಪ್ಪಟ್ಟಾಗಿದೆ. ಬದನೆಕಾಯಿ ಕೆ.ಜಿ.ಗೆ ₹ 200, ಹಸಿ ಮೆಣಸಿನಕಾಯಿ ₹ 150 ಹಾಗೂ ಬೆಂಡೆಕಾಯಿ ಬೆಲೆ ಕೆ.ಜಿ.ಗೆ ₹ 100ಕ್ಕೆ ಏರಿಕೆಯಾಗಿದೆ.
ಕಳೆದ ವಾರ ಒಂದು ಕೆ.ಜಿ ಬದನೆಕಾಯಿ ಹಾಗೂ ಹಸಿ ಮೆಣಸಿನಕಾಯಿ ಬೆಲೆ ಕೆ.ಜಿ.ಗೆ ತಲಾ ₹ 80-₹ 100 ಇತ್ತು. ಬೆಂಡೆಕಾಯಿ ₹ 60-₹ 70 ಇತ್ತು. ಆದರೆ ಈ ವಾರ ಬಹುತೇಕ ಎಲ್ಲಾ ತರಕಾರಿಗಳ ಬೆಲೆ ದುಪ್ಪಟ್ಟಾಗಿದ್ದರಿಂದ ಗ್ರಾಹಕರು ಕಂಗಾಲಾಗಿದ್ದಾರೆ.
‘ಕಾಯಿಪಲ್ಯೆ ಬೆಲೆ ವಿಪರೀತ ಏರಿಕೆಯಿಂದಾಗಿ ಬದುಕು ಸಾಗಿಸುವುದೇ ಕಷ್ಟ ಆಗೈತಿ’ ಎಂದು ಸಂತೆಗೆ ಬಂದಿದ್ದ ಕಬ್ಬಲಗೇರಿ ಹನುಮವ್ವ ಬೇಸರ ವ್ಯಕ್ತಪಡಿಸಿದರು. ‘ರೊಕ್ಕಕ್ಕ ಈಗ ಕಿಮ್ಮತ್ತ ಇಲ್ಲದಂಗ ಆಗೈತಿ’ ಎಂದು ವೃದ್ಧೆ ನೀಲಮ್ಮ ಹೊಸಮನಿ ಅಳಲು ತೋಡಿಕೊಂಡರು.
ಮಾರುಕಟ್ಟೆಗೆ ತರಕಾರಿ ಆವಕದ ಪ್ರಮಾಣ ಕಡಿಮೆಯಾಗುತ್ತಿರುವುದೇ ಬೆಲೆ ಏರಿಕೆಗೆ ಕಾರಣ ಎನ್ನಲಾಗುತ್ತಿದೆ.
ಕಲಬುರಗಿ ಜಿಲ್ಲೆಯಲ್ಲಿ ಬದನೆಕಾಯಿ ಬೆಲೆ ಏಕಾಏಕಿ ಏರಿಕೆಯಾಗಿದ್ದು, ಪ್ರತಿ ಕೆ.ಜಿಗೆ ₹140ರಿಂದ ₹ 160ಕ್ಕೆ ಮಾರಾಟವಾಗುತ್ತಿದೆ. ಕಳೆದ ವಾರ ಈ ದರ ₹100 ಇತ್ತು.
ಮದುವೆ ಹಾಗೂ ಸಮಾರಂಭಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ಬೇಡಿಕೆ ಹೆಚ್ಚಿದೆ. ಆದರೆ, ಬೆಳೆಹಾನಿ ಕಾರಣದಿಂದ ಪೂರೈಕೆ ಕಡಿಮೆಯಾಗಿದ್ದು, ಇದು ಬೆಲೆ ಏರಿಕೆಗೆ ಕಾರಣ ಎಂದು ವರ್ತಕರು ಹೇಳುತ್ತಿದ್ದಾರೆ. ಸಗಟು ಮಾರುಕಟ್ಟೆಯಲ್ಲಿ ರೈತರಿಗೆ ಪ್ರತಿ ಕೆ.ಜಿಗೆ ₹100 ವರೆಗೆ ದರ ಸಿಗುತ್ತಿದೆ.
ತಮಿಳುನಾಡು ರಾಜ್ಯದ ರಾಜ್ಯ ಪಾಲರಾದ ರವೀಂದ್ರ ನಾರಾಯಣ ರವಿ ಹಾಗೂ ಅವರ ಪತ್ನಿ ಲಕ್ಷ್ಮಿರವರು ಶ್ರೀಕ್ಷೇತ್ರ ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟಕ್ಕೆ…
ಮೇ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಐದು ದಿನಗಳ…
ತಾನು ಅನಕ್ಷರಸ್ಥನಾದರೂ ತನ್ನ ಊರಿನ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದೊಂದಿಗೆ ಹರೇಕಳ ಹಾಜಬ್ಬರು ಕಿತ್ತಲೆ ಹಣ್ಣು ಮಾರಾಟ ಮಾಡಿ…
ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು ಅವರೇ ನುಂಗಿಕೊಳ್ಳಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಅಮೆರಿಕದ ವೈಟ್ ಹೌಸ್ ನಲ್ಲಿ ಆಯೋಜಿಸಲಾಗಿದ್ದ ಏಷಿಯನ್ ಅಮೆರಿಕನ್, ಸ್ಥಳೀಯ ಹವಾಯಿಯನ್ ಮತ್ತು ಪೆಸಿಫಿಕ್ ಐಲ್ಯಾಂಡರ್ ಪಾರಂಪರ್ಯ ಮಾಸಾಚರಣೆ ಕಾರ್ಯಕ್ರಮದಲ್ಲಿ…
ವಿಮಾನಗಳಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರ ಕೈ ಚೀಲಗಳಿಂದ ಚಿನ್ನಾಭರಣ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು…