News Karnataka Kannada
Wednesday, May 08 2024
ಹುಬ್ಬಳ್ಳಿ-ಧಾರವಾಡ

ದೇಶದಲ್ಲಿರುವ ಎಲ್ಲ ಮುಸ್ಲಿಮರು ಕೆಟ್ಟವರು ಎಂಬ ಭಾವನೆ ಸರಿಯಲ್ಲ; ಪ್ರಹ್ಲಾದ ಜೋಶಿ

Lok Sabha Elections
Photo Credit :

ಹುಬ್ಬಳ್ಳಿ : ”ದೇಶದಲ್ಲಿ ವಾಸಿಸುತ್ತಿರುವ ಎಲ್ಲ ಮುಸ್ಲಿಮರು ಕೆಟ್ಟವರು ಎಂಬ ಭಾವನೆ ಬೆಳೆಸಿಕೊಳ್ಳುವುದು ಸರಿಯಲ್ಲ, 21ನೇ ಶತಮಾನದಲ್ಲಿ ನಾವೆಲ್ಲ ಒಂದಾಗಿ ಬಾಳಬೇಕಾಗಿರುವುದು ಹಾಗೂ ವಿಶೇಷವಾಗಿ ಕೋಮು ಸೌಹಾರ್ದತೆಯಿಂದ ಇರುವುದು ಅವಶ್ಯವಾಗಿದೆ” ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡದ ನುಗ್ಗಿಕೇರಿಯಲ್ಲಿ ಕೆಲ ಸಂಘಟನೆಗಳ ಕಾರ್ಯಕರ್ತರು ಮುಸ್ಲಿಂ ವ್ಯಾಪಾರಿಗಳ ಮೇಲೆ ಹಲ್ಲೆ ಮಾಡಿ, ಹಣ್ಣು ಇನ್ನಿತರ ಅಂಗಡಿಗಳಿಗೆ ಹಾನಿಪಡಿಸಿರುವುದು ಸರಿಯಲ್ಲ. ಇಸ್ಲಾಂ ಮೂಲಭೂತವಾದಿಗಳು ಹಾಗೂ ಭಯೋತ್ಪಾದನೆ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರ ಹಾಗೂ ದೇಶಪರ ನಿಷ್ಠೆ ಹೊಂದಿಲ್ಲದಂತಹ ಸಂಘಟನೆ, ವ್ಯಕ್ತಿಗಳ ವಿರುದ್ಧ ಪ್ರಜಾಪ್ರಭುತ್ವ ರೀತಿಯಲ್ಲಿ ವಿರೋಧ ವ್ಯಕ್ತಪಡಿಸಬೇಕು. ಆದರೆ ಹಲ್ಲೆ ಮಾಡುವುದು, ಅಂಗಡಿ-ಮುಗ್ಗಟ್ಟುಗಳಿಗೆ ಹಾನಿ ಮಾಡುವಂತಹ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಇಂಥವರನ್ನು ಯಾವುದೇ ಕಾರಣಕ್ಕೂ ಬೆಂಬಲಿಸುವ ಪ್ರಶ್ನೆಯೇ ಇಲ್ಲ. ಅದಕ್ಕೆ ನಾವು ವಿರೋಧಿಯಾಗಿದ್ದೇವೆ. ಎಲ್ಲರೂ ಸಂಯಮದಿಂದ ಇರಬೇಕು. ಕಾಂಗ್ರೆಸ್‌ನ ಮುಖಂಡರು ಸರಕಾರವೇ ಇದಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಬೇಜವಾಬ್ದಾರಿಯುತ ಹೇಳಿಕೆ ಕೊಡುತ್ತಿದ್ದಾರೆ ಎಂದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿಯವರು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಈ ಬಗೆಗಿನ ಹಲವು ಸಂಗತಿಗಳು ನನಗೆ ಗೊತ್ತಿಲ್ಲ. ಅದರ ಬಗ್ಗೆ ವಿವರವಾದ ಮಾಹಿತಿ ಕಲೆ ಹಾಕುವೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು