ಧಾರವಾಡ : ಧಾರವಾಡದ ವಿಜಯಾನಂದನಗರ ಹಾಗೂ ಭಾವಿಕಟ್ಟಿ ಪ್ಲಾಟ್ನಲ್ಲಿ ಮೂರು ಮನೆಗಳಿಗೆ ಕನ್ನ ಹಾಕಿರುವ ಖದೀಮರು ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.
ಭಾವಿಕಟ್ಟಿ ಪ್ಲಾಟ್ನ ಕಲ್ಲಪ್ಪ ಜೋಡಳ್ಳಿ, ವಿಜಯಾನಂದನಗರದ ನಿರ್ಮಲಾ ಬಂಕಾಪುರ ಹಾಗೂ ವೆಂಕಟೇಶ ಟಿಕಾನದಾರ ಎಂಬುವವರ ಮನೆಗೆ ಕನ್ನ ಹಾಕಿರುವ ಕಳ್ಳರು ಅಪಾರ ಪ್ರಮಾಣದ ಚಿನ್ನದ ವಸ್ತು ಹಾಗೂ ನಗದು ದೋಚಿಕೊಂಡು ಹೋಗಿದ್ದಾರೆ.
ಈ ಮೂರೂ ಮನೆಯವರು ಊರಿಗೆ ಹೋದ ಸಂದರ್ಭವನ್ನು ಬಳಕೆ ಮಾಡಿಕೊಂಡ ಕಳ್ಳರು, ಮನೆಯ ಕೀಲಿ ಒಡೆದು ಒಳನುಗ್ಗಿ ಕಲ್ಲಪ್ಪ ಜೋಡಳ್ಳಿ ಅವರ ಮನೆಯ ಅಲ್ಮೆರಾದಲ್ಲಿದ್ದ 10 ಗ್ರಾಂ ಚಿನ್ನದ ಸರ, 15 ಸಾವಿರ ನಗದು ಹಾಗೂ ನಿರ್ಮಲಾ ಬಂಕಾಪುರ ಅವರ ಮನೆಯಲ್ಲಿದ್ದ 40 ಗ್ರಾಂ ಚಿನ್ನದ ವಸ್ತು, 80 ಸಾವಿರ ರೂಪಾಯಿ ನಗದು ದೋಚಿದ್ದಾರೆ. ಇನ್ನು ವೆಂಕಟೇಶ ಟಿಕಾನದಾರ ಅವರ ಮನೆಯಲ್ಲೂ ಕಳ್ಲತನ ಎಸಗಿರುವ ಖದೀಮರು ಅವರ ಮನೆಯಲ್ಲೂ ಕಳ್ಳತನ ಎಸಗಿದ್ದಾರೆ.
ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬೆರಳಚ್ಚು ತಜ್ಞರು ಮತ್ತು ಶ್ವಾನದಳದವರೂ ಭೇಟಿ ನೀಡಿದ್ದಾರೆ.
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…
ಪ್ರಜ್ವಲ್ ಲೈಂಗಿಕ ಹಗರಣದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.
ಬಿಸಿಲಿನ ತಾಪದಿಂದ ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಬೇಕು ಎಂಬ…