ಹುಬ್ಬಳ್ಳಿ : ರಾಜ್ಯದಲ್ಲಿ ಕೊರೊನಾ ಸ್ಪೋಟವಾಗುತ್ತಿರುವ ಹಿನ್ನೆಲೆ ಧಾರವಾಡ ಮತ್ತು ಹುಬ್ಬಳ್ಳಿ ತಾಲ್ಲೂಕಿನ ಶಾಲೆಗಳಿಗೆ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಈ ಹಿಂದೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದರು. ಆದರೆ ಇದೀಗ ಆದೇಶ ವಾಪಸ್ ಪಡೆದಿದ್ದಾರೆ.
ಹೌದು. ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಒಳಗೊಂಡು 1 ರಿಂದ 8ನೇ ತರಗತಿವರೆಗಿನ ಶಾಲೆಗಳಿಗೆ ಜ.13ರಿಂದ ಮುಂದಿನ ಆದೇಶದವರೆಗೂ ರಜೆ ಎಂದು ಆದೇಶ ಹೊರಡಿಸಲಾಗಿತ್ತು.
ಆದರೆ ಇಂದು ಆ ಆದೇಶವನ್ನು ಹಿಂಪಡೆದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸೋಮವಾರದಿಂದ ಮತ್ತೆ ಶಾಲೆಗಳು ಪ್ರಾರಂಭವಾಗಲಿದೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ಶಾಲೆಗೆ ರಜೆ ನೀಡುವುದಾಗಿ ಹೇಳಿದ್ದಾರೆ.