ಹುಬ್ಬಳ್ಳಿ : ನಮಗೆ ಯಾರ ಬಗ್ಗೆಯೂ ಸಾಫ್ಟ್ ಕಾರ್ನಲ್ ಇಲ್ಲ. ಹಾಗೆ ಬಿಜೆಪಿಯ ಬಗ್ಗೆ ಸಾಫ್ಟ್ ಕಾರ್ನರ್ ಇದ್ದಿದ್ದರೇ, ಕಾಂಗ್ರೆಸ್ ಜೊತೆಗೆ ಸರ್ಕಾರ ಯಾಕೆ ಮಾಡುತ್ತಿದ್ದೆ. ಬಿಜೆಪಿಯ ಜೊತೆಗೆ 5 ವರ್ಷ ಕಾಲ ಸರ್ಕಾರ ಮಾಡುತ್ತಿದ್ದೆ ಎಂಬುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಲ್ಲ. ನಿಂದಿಸೋದು ಇಲ್ಲ. ನಾನು ಇತರರಿಗೂ ಹೇಳುವುದು ಒಂದೆ, ವೈಯಕ್ತಿಕ ವಿಚಾರಗಳ ಬಗ್ಗೆ ಕೆಸರೆರಚಾಟ ಬೇಡ ಎಂಬುದಾಗಿದೆ ಎಂದರು.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಮಾಜಿ ಸಿಎಂ ಸಿದ್ಧರಾಮಯ್ಯಗೆ ಕುಮಾರಸ್ವಾಮಿಯೇ ಟಾರ್ಗೆಟ್. ಆದ್ರೇ ನಾನು ಅವರಿಗೆ ಹೇಳುತ್ತೇನೆ. ನೀವು ಇದರಿಂದ ನಿಮ್ಮ ರಾಜಕೀಯ ವರ್ಚಸ್ಸನ್ನು ಕುಂದಿಸಿಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.