ಹುಬ್ಬಳ್ಳಿ: ನಾಳೆಯಿಂದ ನಿಗದಿಯಂತೆ ಪ್ರೌಢ ಶಾಲೆಯ ತರಗತಿಗಳು ಆರಂಭಗೊಳ್ಳಲಿವೆ. ಈ ಬಳಿಕ ಪರಿಸ್ಥಿತಿ ನೋಡಿಕೊಂಡು ಶಾಲಾ-ಕಾಲೇಜು ಆರಂಭಿಸೋ ತೀರ್ಮಾನ ಕೈಗೊಳ್ಳಲಾಗುತ್ತದೆ,ನಾಳೆ ಶಾಂತಿಯುತವಾಗಿ ತರಗತಿಗಳನ್ನು ಆರಂಭಿಸಲಾಗುತ್ತದೆ. ಶಾಲಾ-ಕಾಲೇಜು ಆರಂಭ ನಮ್ಮ ಮೊದಲ ಆದ್ಯತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಜಿಲ್ಲಾಧಿಕಾರಿಗಳು, ಆಡಳಿತ ಮಂಡಳಿಗಳು ಪ್ರಮುಖ ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಯನ್ನು ನಡೆಸಿದ್ದಾರೆ ಎಂದರು.
ನಾಳೆಯಿಂದ ಪ್ರೌಢ ಶಾಲೆಗಳು ಆರಂಭಗೊಳ್ಳುತ್ತಿದ್ದು, ಪರಿಸ್ಥಿತಿ ನೋಡಿಕೊಂಡು ಶಾಲಾ-ಕಾಲೇಜು ಆರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಮೊದಲಿನಂತೆ ಸೌಹಾರ್ದಯುತವಾದ ವಾತಾವರಣದಲ್ಲಿ ಶಾಲೆಗಳು ನಡೆಯಬೇಕು. ಹಿಜಾಬ್-ಕೇಸರಿ ಶಾಲು ಸಂಘರ್ಷದ ಬಗ್ಗೆ ಹಾಕುವಂತ ಸೋಷಿಯಲ್ ಮೀಡಿಯಾ ಪೋಸ್ಟ್ ಬಗ್ಗೆ ಪೊಲೀಸರು ಗಮನಿಸ್ತಾ ಇದ್ದಾರೆ. ಪ್ರಚೋದನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಅಂದಹಾಗೇ ನಾಳೆಯಿಂದ ಪ್ರೌಢ ಶಾಲೆಯ 9 ಮತ್ತು 10ನೇ ತರಗತಿಗಳು ಆರಂಭಗೊಳ್ಳಲಿವೆ. ಪಿಯು ತರಗತಿಗಳಿಗೆ ಫೆಬ್ರವರಿ 16ರವರೆಗೆ ಹಾಗೂ ಪದವಿ ತರಗತಿಗಳಿಗೆ ಫೆ.15ರವರೆಗೆ ರಜೆಯನ್ನು ವಿಸ್ತರಣೆ ಮಾಡಲಾಗಿದೆ.