News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಪಕ್ಷದಲ್ಲಿ ಪ್ರತಿಯೊಬ್ಬರಿಗೂ ಮುಕ್ತವಾಗಿ ಹೇಳಿಕೆ ನೀಡಲು ಅವಕಾಶವಿದೆ: ಜಗದೀಶ ಶೆಟ್ಟರ

Jagadeesh Shettar
Photo Credit :

ಹುಬ್ಬಳ್ಳಿ: ಪಕ್ಷದಲ್ಲಿ ಪ್ರತಿಯೊಬ್ಬರಿಗೂ ಮುಕ್ತವಾಗಿ ಹೇಳಿಕೆ ನೀಡಲು ಅವಕಾಶವಿದೆ. ಶಾಸಕರು ಹಾಗೂ ಸಚಿವರು ವೈಯಕ್ತಿಕವಾಗಿ ನೀಡುವ ಹೇಳಿಕೆಗಳು ಪಕ್ಷ ವಿರೋಧಿ ಚಟುವಟಿಕೆಯಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು, ವೈಯಕ್ತಿಕ ಹೇಳಿಕೆ ಪಕ್ಷ ವಿರೋಧಿ ಎಂದು ಹೇಳುವುದು ಸರಿಯಲ್ಲ ಎಂದು ಸಂಪುಟದಲ್ಲಿರುವ ಹಿರಿಯನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು ಎಂಬ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಹೇಳಿಕೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ನನ್ನ ಹೇಳಿಕೆಯನ್ನು ಪಕ್ಷದ ಆಂತರಿಕ ಸಭೆಯಲ್ಲಿ ವ್ಯಕ್ತಪಡಿಸುತ್ತೇನೆ ಎಂದರು.

ವಿಧಾನಪರಿಷತ್ ಚುನಾವಣೆಯಲ್ಲಿ ಹದಿನೈದು ಸ್ಥಾನಗಳ ಗುರಿ ಪೈಕಿ ಬಿಜೆಪಿ 11ರಲ್ಲಿ ಗೆದ್ದಿದೆ. ಹಿಂದೆ ಕೇವಲ ಆರು ಸ್ಥಾನಗಳಷ್ಟೇ ಇದ್ದವು. ಹಾಗಾಗಿ, ಈ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆಯನ್ನೇ ಮಾಡಿದೆ. ಹಾಗೆ ನೋಡಿದರೆ, ಕಾಂಗ್ರೆಸ್ ಹಿನ್ನಡೆ ಸಾಧಿಸಿದೆ ಎಂದು ಹೇಳಿದರು.

ಈ ಚುನಾವಣೆಗಳು ಸ್ಥಳೀಯ ವಿಷಯಗಳನ್ನು ಆಧರಿಸಿ ಹಾಗೂ ವ್ಯಕ್ತಿಗತವಾಗಿಯೂ ನಡೆಯುತ್ತವೆ. ಹಾಗಾಗಿ, ಪಕ್ಷದ ಶಾಸಕರೇ ಹೆಚ್ಚಾಗಿದ್ದರೂ ಫಲಿತಾಂಶದಲ್ಲಿ ವ್ಯತ್ಯಾಸವಾಗುವುದುಂಟು. ಎಲ್ಲಾ ಪಕ್ಷಗಳಲ್ಲೂ ಹೀಗಾಗುವುದು ಸಾಮಾನ್ಯ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು