ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ನಿಂದಾಗಿ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಅವರಿಗೆ ನೆರವು ನೀಡುವುದು ನಮ್ಮ ಕರ್ತವ್ಯ. ಗುಜರಾತ್ ಹಾಗೂ ತೆಲಂಗಾಣದಲ್ಲಿ ಈಗಾಗಲೇ ಆಸ್ತಿ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಆದರೆ ರಾಜ್ಯದಲ್ಲಿ ಮಾತ್ರ ಅಂತಹ ಕ್ರಮ ಕೈಗೊಂಡಿಲ್ಲ. ಜನರು ಬಿಜೆಪಿಯ ಸುಳ್ಳು ಭರವಸೆ ಗಳಿಗೆ ಮರುಳಾಗದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ, ರಾಜ್ಯದಲ್ಲಿ ಇವರದ್ದೆ ಸರ್ಕಾರ, ಕಳೆದ 15 ವರ್ಷಗಳಿಂದ ಪಾಲಿಕೆಯಲ್ಲಿ ಅಧಿಕಾರ ಇದ್ದರೂ, ಹುಬ್ಬಳ್ಳಿ-ಧಾರವಾಡವನ್ನು ಅಭಿವೃದ್ದಿ ಮಾಡಿಲ್ಲ. ಜನರಿಗೆ ಬಿಜೆಪಿ ಸುಳ್ಳಿನ ಸರಮಾಲೆ ಕೊಟ್ಟಿದೆ ಎಂದರಲ್ಲದೇ ಕಳೆದ ಬಾರಿ ಪ್ರಣಾಳಿಕೆಯಲ್ಲಿ ನೀಡಿದ ಒಂದೂ ಭರವಸೆ ಈಡೇರಿಸಿಲ್ಲ ಎಂದರು.
ಇಲ್ಲಿರುವಂತಹ ಬಿಜೆಪಿ ಸ್ನೇಹಿತರು ಹಾಗೂ ಕೇಂದ್ರ ಸಚಿವರು ಇದಕ್ಕೆ ಉತ್ತರ ಕೊಡಬೇಕು.ಸುಳ್ಳು ಹೇಳಿ ಜನರ ದಾರಿ ತಪ್ಪಿಸುವ ಕೆಲಸ ಏಕೆ ಮಾಡ್ತಾ ಇದೀರಾ..? ನಿಮಗೆ ಜನ್ರು ಏಕೆ ಮತ ಹಾಕಬೇಕು ಎಂದು ಪ್ರಶ್ನಿಸಿದರು.
ಜಗದೀಶ್ ಶೆಟ್ಟರ್, ಪ್ರಹ್ಲಾದ ಜೋಶಿ,ಮುಖ್ಯಮಂತ್ರಿ ಸಾಹೇಬರು ಇತ್ತ ಕಡೆ ನೋಡಬೇಕು. ಇಲ್ಲಿ ನೀವು ಬಂದು ಕೆಲಸ ಮಾಡೋದು ಬೇಡ, ನಿಮ್ಮ ಅಧಿಕಾರಿಗಳನ್ನ ಕಳುಹಿಸಿ ಕೆಲಸ ಮಾಡಿ. ಎಂದರು.
ಹುಬ್ಬಳ್ಳಿ ಧಾರವಾಡಕ್ಕೆ ಹೊರಗಡೆಯವರು ಬಂದ್ರೆ ದೂಳಿನಿಂದ ಬಟ್ಟೆ ಕಲರ್ ಚೆಂಜ್ ಆಗುತ್ತೆ ಹುಬ್ಬಳ್ಳಿಯಿಂದ ಹೋಗುವಾಗ ಬಟ್ಟೆ ಬಿಚ್ಚಿಟ್ಟು ಹೋಗುವ ಸ್ಥಿತಿ ಇದೆ ಎಂದು ವ್ಯಂಗ್ಯವಾಡಿದರು.