News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಸ್ಪರ್ಧೆ ಬಹುತೇಕ ಖಚಿತ: ಅರವಿಂದ ಬೆಲ್ಲದ

Aravind Bellada
Photo Credit :

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಅವರ ಸ್ಪರ್ಧೆ ಬಹುತೇಕ ಖಚಿತ ಎಂದು ಶಾಸಕ ಅರವಿಂದ ಬೆಲ್ಲದ ಸ್ಪಷ್ಟಪಡಿಸಿದರು.

ಭಾನುವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೊರಟ್ಟಿ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಂಡಿದ್ದು, ಪ್ರಕಟಣೆ ಹೊರಡಿಸುವುದು ಮಾತ್ರ ಬಾಕಿ ಇದೆ ಎಂದರು.

ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹಸಚಿವರನ್ನು ಭೇಟಿ ಮಾಡಿದ್ದಾರೆ. ಅವರ ಅಣತಿಯ ಮೇರೆಗೆ ಹೊರಟ್ಟಿ ಅವರು ವಿಧಾನ ಪರಿಷತ್ ಚುನಾವಣೆ ತಯಾರಿ ನಡೆಸಿದ್ದಾರೆ ಎಂದರು.

ಮೋಹನ ಲಿಂಬಿಕಾಯಿ ಅವರು ಮೊದಲಿಂದಲೂ ಬಿಜೆಪಿ ಟಿಕೆಟ್ ಆಕಾಂಕ್ಷಿ. ಯಾವುದೇ ಅಭ್ಯರ್ಥಿ ಚುನಾವಣೆಗೆ ಸ್ಪರ್ಧಿಸುವ ಮೊದಲು ಪೂರ್ವ ತಯಾರಿ ನಡೆಸುವುದು ಸಾಮಾನ್ಯ. ಅದರಂತೆ ಲಿಂಬಿಕಾಯಿ ಅವರು ನಡೆಸಿದ್ದಾರೆ. ಪಕ್ಷದ ಟಿಕೆಟ್ ಸಿಗುವ ಬಗ್ಗೆ ನಾನೇನು ಹೇಳಲಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು