ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆಯ ಉಸ್ತುವಾರಿ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ರಾಣೆಬೆನ್ನೂರು ಶಾಸಕ ಅರುಣಕುಮಾರ ಪೂಜಾರ ಹಾಗೂ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ನಡುವೆ ಸಭೆಯಲ್ಲೇ ಜಟಾಪಟಿ ನಡೆದಿದೆ. ಇಲ್ಲಿನ ಕ್ಯುಬಿಕ್ಸ್ ಹೋಟೆಲ್ನಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯುತ್ತಿದೆ.
ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿ ಹೋದರು. ಬಳಿಕ ನಡೆದ ಇನ್ನೊಂದು ಸಭೆಯಲ್ಲಿ ಈ ಘಟನೆ ನಡೆದಿದೆ. ಗಲಾಟೆ ಜೋರಾಗುತ್ತಿದ್ದಂತೆ ಇಬ್ಬರೂ ಶಾಸಕರ ಬೆಂಬಲಿಗರು ಶಾಸಕ ಜಗದೀಶ ಶೆಟ್ಟರ್ ಸಮ್ಮುಖದಲ್ಲೇ ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದರು.
ನಾನು ರಾಜೀನಾಮೆ ಕೊಡುವೆ ಎಂದು ಅರುಣಕುಮಾರ ಪೂಜಾರ ಹೇಳಿದರು ಎಂದು ಅವರ ಆಪ್ತರೊಬ್ಬರು ತಿಳಿಸಿದರು. ಆಗ ಪಕ್ಷದ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜು ಕಲಕೋಟೆ ಸಮಾಧಾನ ಪಡಿಸಿದರು.
ಆಗ ಮಧ್ಯ ಪ್ರವೇಶಿಸಿದ ಕೆಲ ಕಾರ್ಯಕರ್ತರು ಹಾಗೂ ಜಗದೀಶ ಶೆಟ್ಟರ್ ಎಲ್ಲರನ್ನೂ ಸಮಾಧಾನ ಪಡಿಸಿದರು.
ಘಟನೆ ಬಳಿಕ ಕೆಲ ಹೊತ್ತು ಹೋಟೆಲ್ ನ ಕೊಠಡಿಯಲ್ಲಿ ಕುಳಿತು ಆರ್. ಶಂಕರ್ ನಿರ್ಗಮಿಸಿದರು. ಈ ವೇಳೆ ಪ್ರತಿಕ್ರಿಯಿಸಿ ‘ ಯಾವ ಗಲಾಟೆಯೂ ಆಗಿಲ್ಲ. ಅರುಣ ರಾಜೀನಾಮೆ ಕೊಡುವುದಾದರೆ ಕೊಡಲಿ; ಅದನ್ನು ಅಂಗೀಕಾರ ಮಾಡಬೇಕು’ ಎಂದು ಕಾರು ಹತ್ತಿಕೊಂಡು ಹೊರಟು ಹೋದರು.
ಇವತ್ತು ಕಾಂಗ್ರೆಸ್ ಪಕ್ಷದ ವಿಜಯಪುರ ಲೋಕಸಭಾ ಕ್ಷೇತ್ರದ ಅಭ್ರ್ಥಿ ನನ್ನ ಆತ್ಮೀಯ ಸಹೋದರ ನಾದ ಶ್ರೀ ರಾಜು ಅಲಗೂರ ಅವರ…
ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್…
ಲೋಕಸಭೆಯ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಜಿಲ್ಲೆಯಲ್ಲಿ ಹೇಳುವಂತಹ ಯಾವುದೇ ಅಭಿವೃದ್ಧಿ ಮಾಡಿಲ್ಲ. ಜನರಿಗೆ ಸುಳ್ಳು ಹೇಳುವುದೆ…
ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿನಲ್ಲಿ ನಡೆದಿದೆ.
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಶುಕ್ರವಾರ ನಡೆಯಿತು. ಆದರೆ ಅಂತಹ ದೊಡ್ಡ ನಗರದಲ್ಲಿ ಮತದಾನ…
ನಿನ್ನೆ ಮೊದಲನೇ ಹಂತದ ಚುನಾವಣೆ ಮುಗಿದಿದ್ದು, ಅದರಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ…