News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಬಿಜೆಪಿ ಸೇರುವ ಕುರಿತು ನಾನು ಈವರೆಗೂ ತೀರ್ಮಾನ ಕೈಗೊಂಡಿಲ್ಲ : ಬಸವರಾಜ ಹೊರಟ್ಟಿ

'India' was the name given by the British in the past, now there is nothing wrong with India: Horatti
Photo Credit :

ಹುಬ್ಬಳ್ಳಿ: ನನ್ನ ಮೇಲೆ ಪ್ರಲ್ಹಾದ ಜೋಶಿಯರವರಿಗೆ ಪ್ರೀತಿ ಜಾಸ್ತಿ, ಅದಕ್ಕೆ ಅಷ್ಟು ಕಾಳಜಿ ಮಾಡುತ್ತಾರೆ.  ಬಿಜೆಪಿ ಸೇರುವ ಕುರಿತು ನಾನು ಈವರೆಗೂ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ ವರೆಗೂ ಯಾವುದೇ ನಿರ್ಧಾರವನ್ನು ಸಹ ಕೈಗೊಳ್ಳುವುದಿಲ್ಲ ಎಂದರು. ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಎರಡು ಹೆಸರು ಹೈಕಮಾಂಡ್’ಗೆ ಹೋಗಿದ್ದು, ಅದರಲ್ಲಿ ನನ್ನ ಹೆಸರು ಇದ್ದರೂ ಇರಬಹುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಅವರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಸಚಿವ ಈಶ್ವರಪ್ಪ ರಾಜೀನಾಮೆ ನೀಡಲ್ಲ ಅಂತಾರೆ, ಕಾಂಗ್ರೆಸ್ ರಾಜೀನಾಮೆ ಪಡೆಯದೇ ಬಿಡಲ್ಲ ಅನ್ನುತ್ತಿದೆ. ಸದನದಲ್ಲಿ ನಡೆಯುತ್ತಿರುವ ಬಿಜೆಪಿ, ಕಾಂಗ್ರೆಸ್ ಗದ್ದಲ, ಗಂಡ-ಹೆಂಡತಿ ನಡುವೆ ಕೂಸು ಬಡವಾದ ಹಾಗಾಗಿದೆ‌.

ರಾಜ್ಯದ ಜನತೆಗೆ ನಾವು ಅನ್ಯಾಯ‌ ಮಾಡುತ್ತಿದ್ದೇವೆ. ನಾನು ಸಭಾಪತಿಯಾಗಿ ಮಾತನಾಡುತ್ತಿಲ್ಲ. ಸಾಮಾನ್ಯ ಪ್ರಜೆಯಾಗಿ ಮಾತನಾಡುತ್ತಿದ್ದೇನೆ. ನಾವು ಜನರಿಗೆ ಮೋಸ, ಅವಮಾನ ಕೆಟ್ಟದ್ದು ಮಾಡುತ್ತಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಾನು ಸಹ ವಿರೋಧ ಪಕ್ಷದವರ ಮನವೊಲಿಸಲು ಯತ್ನಿಸುತ್ತೇನೆ. ಇವರ ಗದ್ದಲದಿಂದ ಬಹಳಷ್ಟು ನೋವಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು