ಹುಬ್ಬಳ್ಳಿ-ಧಾರವಾಡ

ಬೆಳೆಹಾನಿಗೊಳಗಾದ ಎಲ್ಲಾ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಲಾಗುವುದು: ಬಿ.ಸಿ ಪಾಟೀಲ್

ದಾವಣಗೆರೆ: ರಾಜ್ಯಾದ್ಯಂತ ಬಿದ್ದ ಅಕಾಲಿಕ ಮಳೆಯಿಂದ ದಾವಣಗೆರೆ ಜಿಲ್ಲೆಯಲ್ಲಿ 2651 ಹೆಕ್ಟೇರ್ ಬೆಳೆ ನಾಶವಾಗಿದೆ, ಹಾನಿಗೊಳಗಾದ ಎಲ್ಲಾ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.

ಹರಿಹರ ತಾಲ್ಲೂಕಿನ ನಂದಿತಾವರೆ ಬಳಿಯ ಭಾಸ್ಕರರಾವ್ ಕ್ಯಾಂಪಿನಲ್ಲಿ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳನ್ನು ವೀಕ್ಷಿಸಿದ ನಂತರ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 40 ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಅಕಾಲಿಕ ಮಳೆಯಿಂದ ಪ್ರವಾಹ ಬಂದು ಎಲೆಬಳ್ಳಿ, ಅಡಿಕೆ, ಭತ್ತ ಬೆಳೆ ಹಾನಿಯಾಗಿದೆಯೋ, ಅಲ್ಲೆಲ್ಲಾ ಸಂಪೂರ್ಣ ಸರ್ವೆ ನಡೆಸಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಸಲ್ಲಿಸಿದ ಬಳಿಕ ತಕ್ಷಣ ಸರ್ಕಾರದಿಂದ ರೈತರಿಗೆ ಪರಿಹಾರ ನೀಡುವ ಪ್ರಯತ್ನ ಮಾಡಲಾಗುವುದು. ಅಧಿಕಾರಿಗಳು ಕಛೇರಿಯಲ್ಲಿ ಕೂಡದೆ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ನಷ್ಟ ಅಂದಾಜು ಮಾಡುವುದು ಹಾಗೂ ಅವರಿಗೆ ಸೂಕ್ತ ಬೆಳೆಹಾನಿ ಪರಿಹಾರ ನೀಡುವುದರತ್ತ ಗಮನ ಹರಿಸಬೇಕೆಂದರು.

ದಾವಣಗೆರೆ ಜಿಲ್ಲೆಯ ಮಲೆಬೇನ್ನೂರು, ಬಿಳಿಚೋಡು, ಚನ್ನಗಿರಿ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಹಾನಿಯಾಗಿದೆ, ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಪರಿಹಾರ ಕೊಡಲಾಗುವುದು. ಕಳೆದ ಬಾರಿ ಕೇಂದ್ರ ಸರ್ಕಾರದ ಎನ್‍ಡಿಆರ್‍ಎಫ್ ಮಾರ್ಗಸೂಚಿಗಿಂತ ಹೆಚ್ಚಿಗೆ ಪರಿಹಾರ ಹಣ ನೀಡಲಾಗಿದೆ, ಪ್ರಸ್ತುತ ವರ್ಷವೂ ಅಷ್ಟೇ ಪ್ರಮಾಣದಲ್ಲಿ ಪರಿಹಾರ ನೀಡಲಾಗುವುದು, 2021-22 ನೇ ಸಾಲಿನ ವಿಮಾ ಹಣ ಇನ್ನೊಂದು ವಾರದಲ್ಲಿ ರೈತರ ಕೈ ಸೇರಲಿದೆ ಎಂದರು.

ಭತ್ತದ ಬೆಳೆಗೆ ವಿಮಾ ಪರಿಹಾರ ವಿಷಯದಲ್ಲಿ ರೈತರಿಗೆ ಆತಂಕ ಬೇಡ, ಬಿರುಗಾಳಿಗೆ ಭತ್ತ ನೆಲಕ್ಕೆ ಬಿದ್ದಿರುವುದರಿಂದ ಅದು ಪ್ರಕೃತಿ ವಿಕೋಪ ಪರಿಹಾರದಡಿ ಬರುತ್ತದೆ, ಹಾಗಾಗಿ ಭತ್ತದ ಬೆಳೆಗೆ ಪರಿಹಾರ ಸಿಗಲಿದೆ ಎಂದರು.

ಈಗಾಗಲೇ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಪ್ರಸಕ್ತ ವರ್ಷ ಈಗಷ್ಟೇ ಮುಂಗಾರು ಪ್ರಾರಂಭವಾಗಿದೆ, ದುರುದ್ದೇಶದಿಂದ ವ್ಯಾಪಾರಸ್ಥರು ಅಕ್ರಮವಾಗಿ ಸಂಗ್ರಹಣೆ ಮಾಡಿಕೊಂಡು ಅದನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದಕ್ಕೋಸ್ಕರ ರಸಗೊಬ್ಬರ ಮತ್ತು ಬೀಜದ ಕೊರತೆಯಾಗುತ್ತದೆ ಎಂಬ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ರಸಗೊಬ್ಬರ ಮತ್ತು ಬೀಜಕ್ಕೆ ಯಾವುದೇ ರೀತಿಯ ಕೊರತೆಯಿಲ್ಲ ಹಾಗಾಗಿ ಜಿಲ್ಲಾಧಿಕಾರಿಗಳು, ಕೃಷಿ ಇಲಾಖೆ, ಪೊಲೀಸ್ ಇಲಾಖೆ, ಕೃತಕ ಗೊಬ್ಬರದ ಅಭಾವ ಉಂಟಾಗುವಂತೆ ಮಾಡುವವರ ಮೇಲೆ ಕಟ್ಟುನಿಟ್ಟಿನ ಕ್ರಮವನ್ನು ಜರುಗಿಸಿ, ಯಾವುದೇ ರೀತಿಯ ರಸಗೊಬ್ಬರ ಮತ್ತು ಬೀಜದ ಕೊರತೆಯಾಗದಂತೆ ನೋಡಿಕೊಂಡು ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ರಷ್ಯಾ-ಉಕ್ರೇನ್ ಯುದ್ದ ನಡೆಯುತ್ತಿರುವ ಹಿನ್ನಲೆ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ, ಆದರೆ ಕೇಂದ್ರ ಸರ್ಕಾರ 2 ಲಕ್ಷದ 39 ಸಾವಿರ ಕೋಟಿ ರೂಪಾಯಿಯ ಸಹಾಯಧನವನ್ನು ರಸಗೊಬ್ಬರಗಳಿಗೆ ನೀಡುತ್ತಿದೆ. ಅಂತರ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಚೀಲ ಡಿಎಪಿ ಬೆಲೆ 3851.ರೂ ಇದೆ ಅದನ್ನು ರೈತರಿಗೆ 2501.ರೂ ಸಹಾಯಧನ ನೀಡಿ 1361.ರೂಗೆ ಮಾರಾಟ ಮಾಡಲಾಗುತ್ತದೆ. ಯೂರಿಯಾ ಬೆಲೆ 1666.ರೂ ಇದೆ, ಅದಕ್ಕೆ 1400.ರೂ ಸಹಾಯಧನ ನೀಡಿ 266 ರೂಗೆ ಮಾರಾಟ ಮಾಡಲಾಗುತ್ತದೆ. ಕಾಂಪ್ಲೇಕ್ಸ್ ಬೆಲೆ 3204.ರೂ ಇದೆ ಇದಕ್ಕೆ 1734.ರೂಗಳ ಸಹಾಯಧನ ಒದಗಿಸಿ 1470.ರೂಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ರೈತರು ವಿವಿಧ ಬೆಳೆ ಬೆಳೆಯುವ ಮೂಲಕ ಸಮತೋಲನ ಕಾಪಾಡಬೇಕು, ಯಾವುದಾದರೊಂದು ಬೆಳೆ ಬೆಲೆ ಕೈಕೊಟ್ಟರೆ ಮತ್ತೊಂದು ಬೆಳೆ ಕೈ ಹಿಡಿಯುತ್ತದೆ, ಹಾಗಾಗಿ ಒಂದೇ ಬೆಳೆ ಬೆಳೆಯದೆ ಬಹು ಬೆಳೆಗಳನ್ನು ಬೆಳೆಯುವತ್ತ ರೈತರು ಗಮನ ಹರಿಸಬೇಕೆಂದರು.

ಈ ಸಂದರ್ಭದಲ್ಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ಮೊದಲಾದವರಿದ್ದರು.

Gayathri SG

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

6 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

6 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

7 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

7 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

7 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

7 hours ago