News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ರಾಜ್ಯದಲ್ಲಿ 15 ಸ್ಥಾನ ಬಿಜೆಪಿ ಜಯ ನಿಶ್ಚಿತ: ಮಾಜಿ ಸಿಎಂ ಜಗದೀಶ ಶೆಟ್ಟರ್

Jagadeesh Shetter
Photo Credit :

 ಹುಬ್ಬಳ್ಳಿ: ಪಕ್ಷದ ನಾಯಕರು, ಶಾಸಕರು ಮತ್ತು ಕಾರ್ಯಕರ್ತರು ಎಲ್ಲರೂ ಸೇರಿ ಒಗ್ಗಟ್ಟಿನಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದು, ಇಡೀ ರಾಜ್ಯದಲ್ಲಿ 15 ಸ್ಥಾನಗಳನ್ನು ಬಿಜೆಪಿ ಜಯಗಳಿಸುತ್ತೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.

ನಗರದಲ್ಲಿ ಶುಕ್ರವಾರ ಮತದಾನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರು ಮತ್ತು ಪಾಲಿಕೆ ಚುನಾಯಿತ ಸದಸ್ಯರು ಸೇರಿದಂತೆ ಎಲ್ಲರ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಬಿಜೆಪಿಯ ಅಭ್ಯರ್ಥಿಗಳು ದಾಖಲೆ ಮತಗಳನ್ನು ಪಡೆದು ಗೆಲವು ಸಾಧಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

ಧಾರವಾಡಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಯಾದ ಪ್ರದೀಪ ಶೆಟ್ಟರ ಅವರು ಈ ಹಿಂದೆ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಪ್ರಚಾರದ ವೇಳೆ ಮೂರು ಜಿಲ್ಲೆಗಳಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಅತೀ ಹೆಚ್ಚು ಮತಗಳನ್ನು ಪಡೆದು ಜಯಗಳಿಸುತ್ತಾರೆ.

ಬಂಡಾಯ ಅಭ್ಯರ್ಥಿ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ. ಬಿಜೆಪಿ ಅಭ್ಯರ್ಥಿ ಗೆಲ್ಲುವುದರಲ್ಲಿ ಅನುಮಾನವಿಲ್ಲ ಎಂದರು.
ಬೆಳಗಾವಿ ಅಧಿವೇಶದಲ್ಲಿ ನಡೆಯುತ್ತೋ ಇಲ್ಲೋ ಎಂಬ ಪ್ರಶ್ನೆ ಬಂದಾಗ ಬಿಜೆಪಿ ಸರ್ಕಾರ ಎಲ್ಲದಕ್ಕೂ ತೆರೆಯಳೆದು ನಡೆಸುತ್ತಿದೆ.

ಅದಕ್ಕಾಗಿ ಈ ಭಾಗದ ಸಮಸ್ಯೆಗಳಿಗೆ ಖಂಡಿತವಾಗಿ ಧ್ವನಿಯಾಗಲಿದೆ. ವಿರೋಧ ಪಕ್ಷದವರ ಸಹಕಾರ ಬಹಳ ಮುಖ್ಯ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು