ಹುಬ್ಬಳ್ಳಿ: ಪಕ್ಷದ ನಾಯಕರು, ಶಾಸಕರು ಮತ್ತು ಕಾರ್ಯಕರ್ತರು ಎಲ್ಲರೂ ಸೇರಿ ಒಗ್ಗಟ್ಟಿನಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದು, ಇಡೀ ರಾಜ್ಯದಲ್ಲಿ 15 ಸ್ಥಾನಗಳನ್ನು ಬಿಜೆಪಿ ಜಯಗಳಿಸುತ್ತೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.
ನಗರದಲ್ಲಿ ಶುಕ್ರವಾರ ಮತದಾನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರು ಮತ್ತು ಪಾಲಿಕೆ ಚುನಾಯಿತ ಸದಸ್ಯರು ಸೇರಿದಂತೆ ಎಲ್ಲರ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಬಿಜೆಪಿಯ ಅಭ್ಯರ್ಥಿಗಳು ದಾಖಲೆ ಮತಗಳನ್ನು ಪಡೆದು ಗೆಲವು ಸಾಧಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.
ಧಾರವಾಡಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಯಾದ ಪ್ರದೀಪ ಶೆಟ್ಟರ ಅವರು ಈ ಹಿಂದೆ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಪ್ರಚಾರದ ವೇಳೆ ಮೂರು ಜಿಲ್ಲೆಗಳಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಅತೀ ಹೆಚ್ಚು ಮತಗಳನ್ನು ಪಡೆದು ಜಯಗಳಿಸುತ್ತಾರೆ.
ಬಂಡಾಯ ಅಭ್ಯರ್ಥಿ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ. ಬಿಜೆಪಿ ಅಭ್ಯರ್ಥಿ ಗೆಲ್ಲುವುದರಲ್ಲಿ ಅನುಮಾನವಿಲ್ಲ ಎಂದರು.
ಬೆಳಗಾವಿ ಅಧಿವೇಶದಲ್ಲಿ ನಡೆಯುತ್ತೋ ಇಲ್ಲೋ ಎಂಬ ಪ್ರಶ್ನೆ ಬಂದಾಗ ಬಿಜೆಪಿ ಸರ್ಕಾರ ಎಲ್ಲದಕ್ಕೂ ತೆರೆಯಳೆದು ನಡೆಸುತ್ತಿದೆ.
ಅದಕ್ಕಾಗಿ ಈ ಭಾಗದ ಸಮಸ್ಯೆಗಳಿಗೆ ಖಂಡಿತವಾಗಿ ಧ್ವನಿಯಾಗಲಿದೆ. ವಿರೋಧ ಪಕ್ಷದವರ ಸಹಕಾರ ಬಹಳ ಮುಖ್ಯ ಎಂದು ತಿಳಿಸಿದರು.