News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ರೈತರ ಹೆಸರಿನಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿರುವ ಕಾಂಗ್ರೆಸ್ : ಸಚಿವ ಅಶ್ವತ್ಥ್​ ನಾರಾಯಣ್​

Dcm Ashwath Narayan 12 7 21
Photo Credit :

ಹುಬ್ಬಳ್ಳಿ: ಬಿಜೆಪಿ ಯಾವಾಗಲೂ ರೈತರ ಪರವಿದೆ ಕಾಂಗ್ರೆಸ್ ರೈತರ ಹೆಸರು ಹೇಳಿಕೊಂಡು  ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಸಚಿವ ಅಶ್ವತ್ಥ್​ ನಾರಾಯಣ್​ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯ ಬಗ್ಗೆ ಅಲ್ಲಿನ ಸರ್ಕಾರ ಸೂಕ್ತ ಕ್ರಮ ವಹಿಸಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದೆ. ಸರ್ಕಾರ ಕ್ರಮ ವಹಿಸಿ ಸಮಸ್ಯೆಯನ್ನು ತಿಳಿಗೊಳಿಸುವ ಕಾರ್ಯ ಮಾಡುತ್ತಿದೆ ಎಂದು ಸಮರ್ಥನೆ ನೀಡಿದರು. ರೈತರು ಸಬಲೀಕರಣ ಆಗಬಾರದು. ಅವರು ಉನ್ನತಿ ಹೊಂದಬಾರದು ಅನ್ನೋದು ಕಾಂಗ್ರೆಸ್​ನವರ ಕಲ್ಪನೆ. ಅವರ ಕಲ್ಪನೆ ಇಟ್ಟುಕೊಂಡು ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ನಾವೆಲ್ಲ ಅನ್ನದಾತರ ಕುಟುಂಬಕ್ಕೆ ಸೇರಿದವರು. ರೈತರ ಶಕ್ತಿ ಹೆಚ್ಚಿಸಲು ಸುಧಾರಣೆಗಳು ಪೂರಕವಾಗಿವೆ. ಕುತಂತ್ರ, ತಂತ್ರಗಾರಿಕೆ ಮೂಲಕ ದಾರಿ ತಪ್ಪಿಸುವ ಪ್ರಯತ್ನವನ್ನ ಪ್ರತಿಪಕ್ಷ ಮತ್ತು ಕೆಲವು ಸಂಘಟನೆಗಳು ಮಾಡುತ್ತಿವೆ ಎಂದು ಆರೋಪಿಸಿದರು.
ಸಚಿವ ಅಶ್ವಥ್ ನಾರಾಯಣ್ ​ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರರನ್ನ ತಡವಾಗಿ ಉಪಚುನಾವಣೆ ಪಟ್ಟಿಗೆ ಸೇರಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಎಲ್ಲರೂ ಪಕ್ಷದವರೇ. ಪ್ರತ್ಯೇಕವಾಗಿ, ವಿಶೇಷವಾಗಿ ಬೆಳಕನ್ನ ಚೆಲ್ಲೋದು ಅಷ್ಟು ಸೂಕ್ತವಲ್ಲ. ಎಲ್ಲರಿಗೂ ಪಕ್ಷದಲ್ಲಿ ಸ್ಥಾನಮಾನವಿದೆ. ಎಲ್ಲರಿಗೂ ಜವಾಬ್ದಾರಿ ಇದೆ. ರಾಜಕೀಯದಲ್ಲಿ ಎಲ್ಲರಿಗೂ ಅವಕಾಶ ಇದ್ದೇ ಇರುತ್ತೆ ಎಂದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು