News Karnataka Kannada
Tuesday, April 30 2024
ಹುಬ್ಬಳ್ಳಿ-ಧಾರವಾಡ

ಶಾಂತಿಯುತವಾಗಿ ಶಾಲೆ-ಕಾಲೇಜು ನಡೆಸುವುದು ನಮ್ಮ ಆದ್ಯತೆ: ಸಿಎಂ ಬೊಮ್ಮಾಯಿ

Cm Bommayi
Photo Credit : News Kannada

ಹುಬ್ಬಳ್ಳಿ: ರಾಜ್ಯದಲ್ಲಿ ನಾಳೆಯಿಂದ 9 ಮತ್ತು 10ನೇ ತರಗತಿ ಪ್ರೌಢಶಾಲೆ ತರಗತಿಗಳನ್ನು ಆರಂಭಿಸುತ್ತಿದ್ದೇವೆ,ಪ್ರೌಢಶಾಲೆ ತರಗತಿಗಳು ಹೇಗೆ ನಡೆಯುತ್ತವೆ ಎಂದು ನೋಡಿಕೊಂಡು ಮುಂದೆ ಕಾಲೇಜುಗಳನ್ನು ಆರಂಭಿಸುತ್ತೇವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ತಮ್ಮ ಶಿಗ್ಗಾಂವ್ ಕ್ಷೇತ್ರಕ್ಕೆ ತೆರಳಲಿರುವ ಅವರು ಅದಕ್ಕೂ ಮೊದಲು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ,  ನಮ್ಮ ಅಧಿಕಾರಿಗಳು ಶಾಲೆಗಳ ಸುತ್ತಮುತ್ತ ತೀವ್ರ ಎಚ್ಚರಿಕೆ ವಹಿಸಲಿದ್ದಾರೆ.ಈಗಾಗಲೇ ಶಾಲಾ ಆಡಳಿತ ಮಂಡಳಿ, ಜಿಲ್ಲಾಧಿಕಾರಿಗಳಿಗೆ ಶಾಂತಿ ಸಭೆಗಳನ್ನು ನಡೆಸಲು ಸೂಚಿಸಿದ್ದೇನೆ ಎಂದರು.

ಶಾಂತಿಯುತವಾಗಿ ತರಗತಿಗಳು ಆರಂಭವಾಗಿ ನಿರಾತಂಕವಾಗಿ ಸಾಗುವುದು ಮೊದಲಿನಂತೆ ಸೌಹಾರ್ದಯುತವಾಗಿ ವಿದ್ಯಾರ್ಥಿಗಳು ಶಾಲೆಗಳಿಗೆ ಬಂದು ಹೋಗುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಶಾಲೆಗಳು ಶಾಂತಿಯುತವಾಗಿ ಮೊದಲಿನಂತೆ ನಡೆಯುವುದು ನಮ್ಮ ಆದ್ಯತೆಯಾಗಿದೆ. ಹೀಗಾಗಿ ಸೋಷಿಯಲ್ ಮೀಡಿಯಾಗಳಲ್ಲಿ, ಬಹಿರಂಗವಾಗಿ ಯಾರು ಕೂಡ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡದಂತೆ ನೋಡಿಕೊಳ್ಳುವಂತೆ ಹೇಳಿದ್ದೇನೆ ಎಂದರು.

ಹೈಕೋರ್ಟ್​ ಸೂಚನೆ ಮೇರೆಗೆ ತರಗತಿಗಳು ಆರಂಭವಾಗುತ್ತಿದೆ. ಸರ್ಕಾರ 9 ಹಾಗು 10ನೇ ತರಗತಿ ಆರಂಭಕ್ಕೆ ಸೂಚನೆ ನೀಡಿದೆ. ಶಾಲೆಗಳಿಗೆ ಹಿಜಾಬ್-ಕೇಸರಿ ಶಾಲಿಗೆ ಅನುಮತಿ ಇಲ್ಲ , ಸಮವಸ್ತ್ರದಲ್ಲಿ ವಿದ್ಯಾರ್ಥಿಗಳು ಶಾಲೆಗಳಿಗೆ ತೆರಳುವಂತೆ ಸೂಚಿಸಿದೆ. ಫೆಬ್ರವರಿ 15ರಿಂದ ಪದವಿ ಕಾಲೇಜುಗಳ ತರಗತಿ ಆರಂಭಕ್ಕೆ ನಿರ್ಧಾರ ಮಾಡಿದೆ. ಸರ್ಕಾರವು ಶಾಲೆಆವರಣದಲ್ಲಿ ಅಹಿತಕರ ಘಟನೆ ನಡೆಯದಂತೆ ಎಚ್ಚರ ನೀಡಿದ್ದು , ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿಸಲು ಸೂಚನೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು