News Karnataka Kannada
Saturday, May 04 2024
ಹುಬ್ಬಳ್ಳಿ-ಧಾರವಾಡ

ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುವುದೇ ಆರ್.ಎಸ್.ಎಸ್. ಕೆಲಸ- ಸಿದ್ದರಾಮಯ್ಯ

Siddaramaiah Bang 17 6 21 No 176218 Newsk 3471785224
Photo Credit :

ಹುಬ್ಬಳ್ಳಿ :ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುವುದೇ ಆರ್.ಎಸ್.ಎಸ್. ಕೆಲಸ. ದೇಶದಲ್ಲಿರುವ ಹಿಂದೂಗಳು ಹಾಗೂ ಮುಸ್ಲಿಂರ ಭಾವನೆಗಳನ್ನು ಕೆದಕಿ ಪರಸ್ಪರ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ‌ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಜಾತಿ, ಧರ್ಮಗಳ ನಡುವೆ ತಾರತಮ್ಯವನ್ನು ಸೃಷ್ಟಿಸುತ್ತಿದೆ. ಆದರೆ ಕಾಂಗ್ರೆಸ್ ನಲ್ಲಿ ಹಾಗಿಲ್ಲ.ಆರ್.ಎಸ್.ಎಸ್. ವಿರುದ್ಧ ಮತ್ತೆ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಆರ್.ಎಸ್.ಎಸ್ ಎಂಬುದು ಒಂದು ಕೋಮುವಾದಿ ಸಂಘಟನೆ. ದೇಶದಲ್ಲಿ ಅಶಾಂತಿ ಸೃಷ್ಟಿಸುವುದೇ ಅದರ ಉದ್ದೇಶ ಎಂದರು.

ಹಿಂದೂ, ಮುಸ್ಲಿಂ, ಸಿಖ್, ಜೈನರು ಹೀಗೆ ಎಲ್ಲಾ ಧರ್ಮದವರನ್ನು ಸಮಾನವಾಗಿ ಕಾಣುತ್ತೇವೆ. ಎಲ್ಲರಿಗೂ ಸಮಾನ ಅವಕಾಶ ನೀಡುವುದೇ ನಮ್ಮ ಉದ್ದೇಶ ಎಂದರು.ಬಿಜೆಪಿ ಎಂದರೆ ಆರ್.ಎಸ್.ಎಸ್. ಮುಖವಾಡ. ಆರ್ ಎಸ್.ಎಸ್. ಮುಖಂಡರು ಏನು ನಿರ್ದೇಶಿಸುತ್ತಾರೋ ಅದನ್ನು ಬಿಜೆಪಿಯವರು ಮಾಡುತ್ತಾರೆ. ಹಾಗಾಗಿ ಬಿಜೆಪಿ ಸರ್ಕಾರ ಎಂಬುದು ಆರ್.ಎಸ್.ಎಸ್. ನಾಯಕರ ಕೈಗೊಂಬೆ ಎಂದು ವಾಗ್ದಾಳಿ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು