ಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ನೇಹಿತ, ಉದ್ಯಮಿ ರಾಜು ಬಿ. ಪಾಟೀಲ (63) ಬುಧವಾರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ.
ಮೃತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕುಟುಂಬ ವರ್ಗದ ಸ್ನೇಹಿತರಾಗಿದ್ದು, ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ನಗರಕ್ಕೆ ಬಂದು ಮೃತರ ಅಂತ್ಯಕ್ರಿಯೆಯಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ.
ರಾಜು ಪಾಟೀಲ ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ಬಾಲ್ಯದಿಂದಲೇ ಇಬ್ಬರು ಕೂಡಿ ಬೆಳೆದವರು. ಅವರ ಅಗಲಿಕೆ ನನಗೆ ತೀವ್ರ ದುಃಖವಾಗಿದೆ. ಆ ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.