ಹುಬ್ಬಳ್ಳಿ: ದುರುದ್ದೇಶ ಪೂರ್ವಕವಾಗಿ ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ನನಗೆ ಅನಿಸುತ್ತಿದೆ. ನಮ್ಮ ದೇಶಕ್ಕೆ ತನ್ನದೇ ಆದ ಸಂಸ್ಕೃತಿ ಇದೆ. ಹಾಗಾಗಿ ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಏನು ಎಂಬುದನ್ನು ಅವರ ಪಕ್ಷದ ನಾಯಕರು ಸ್ಪಷ್ಟಪಡಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೀಗಾಗಿ ಹಿಜಾಬ್ ಸಂಬಂಧ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟಪಡಿಸಲಿ ಅದನ್ನ ಬಿಟ್ಟು ಏನೇನೊ ಹೇಳಿಕೆಗಳನ್ನ ನೀಡುವ ಮೂಲಕ ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡಬಾರದು ಎಂದು ಆಗ್ರಹಿಸಿದರು.
ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಒಂದು ರೀತಿ ಹೇಳುತ್ತಾರೆ, ಜಮೀರ್ ಅಹ್ಮದ್ ಒಂದು ರೀತಿ ಹೇಳುತ್ತಿದಾರೆ. ಈ ರೀತಿ ಏನೇನೊ ಹೇಳಿಕೆಗಳನ್ನ ನೀಡುವ ಮೂಲಕ ಮಕ್ಕಳಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ ಮಾಡುತ್ತಿದೆ. ಆದ್ದರಿಂದ ಕಾಂಗ್ರೆಸ್ ಹಿಜಾಬ್ ವಿಚಾರದಲ್ಲಿ ತನ್ನ ನಿಲುವು ಏನೂ ಎಂಬುವುದನ್ಮು ಸ್ಪಷ್ಟಪಡಿಸಲಿ ಮಕ್ಕಳು ಶಾಲೆಗೆ ಕಲಿಯಲು ಬರುತ್ತಾರೆ. ಕಲಿಯಲು ಬಿಡಿ ಅವರಲ್ಲಿ ವಿಷ ಬೀಜ ಬಿತ್ತುವುದನ್ನ ನಿಲ್ಲಿಸಿ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.