News Karnataka Kannada
Thursday, May 09 2024
ಹುಬ್ಬಳ್ಳಿ-ಧಾರವಾಡ

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬಸವರಾಜ ಬೊಮ್ಮಾಯಿ

Basavaraj
Photo Credit :

ಹುಬ್ಬಳ್ಳಿ: ಮೂರು ನಾಡ ಗೀತೆಗಳನ್ನು ಹಾಡುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿಯವರು ಲಕ್ಷ ಕಂಠಗಳ ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡಿಗೆ ಹೆಜ್ಜೆ ಹಾಕಿದರು.

ಇಲ್ಲಿಯ ಅಶೋಕನಗರದ ಕನ್ನಡ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ ಮಾತಾಡ್ ಮಾತಾಡ್ ಕನ್ನಡ ಅಭಿಯಾನದಲ್ಲಿ ಭಾಗವಹಿಸಿ ಜಯ ಭಾರತ ಜನನಿಯ ತನುಜಾತೆ, ಬಾರಿಸು ಕನ್ನಡ ಡಿಂಡಿಮವ, ಜೋಗದ ಸೀರಿ ಬೆಳಕಿನಲ್ಲಿ ಮತ್ತು ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಗೀತೆಗಳನ್ನು ಹಾಡಿದರು.

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಅವರು ಮಾತನಾಡಿ, ಒಂದುವಾರ ನಡೆಯಲಿರುವ ಮಾತಾಡ್ ಮಾತಾಡ್ ಕನ್ನಡ ಅಭಿಯಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ,ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ರಾಜ್ಯಕ್ಕೆ ದೇಶದಲ್ಲಿ ತನ್ನದೆಯಾದ ಇತಿಹಾಸವಿದ್ದು, ಪ್ರತಿಯೊಬ್ಬರು ಕನ್ನಡದಲ್ಲಿ ಮಾತನಾಡಿ, ಕನ್ನಡ ಓದಿ, ಬರೆದು ಭಾಷೆಯನ್ನು ಉಳಿಸಿ ಬೆಳೆಸಬೇಕಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು