ಹುಬ್ಬಳ್ಳಿ : ಚಿಂದಿ ಆಯುವ ಮಹಿಳೆಯನ್ನು ಭೀಕರವಾಗಿ ಕೊಲೆಗೈದ ಘಟನೆ ನೆಹರೂ ಮೈದಾನ ಬಳಿಯ ಕೃಷ್ಣ ಭವನ ಎದುರು ಶನಿವಾರ ಬೆಳಗಿನ ಜಾವ ನಡೆದಿದೆ.
ದಾವಣಗೆರೆ ಮೂಲದ ಮಹಿಳೆ ಕೊಲೆಯಾಗಿದ್ದು, ಆರ್.ಟಿ. ಬಳ್ಳಾರಿ ಎಂಬಾತ ಕೊಲೆ ಮಾಡಿದ್ದಾನೆಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಡಿಸಿಪಿ, ಎಸಿಪಿ ಹಾಗೂ ಶಹರ ಠಾಣೆ ಇನ್ಸಪೆಕ್ಟರ್ ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ. ಶವವನ್ನು ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೊಲೆ ಮಾಡಿ ದಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿಖರ ಕಾರಣ ತಿಳಿದು ಬಂದಿಲ್ಲ. ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.