ಹುಬ್ಬಳ್ಳಿ: ಕೆಟ್ಟು ನಿಂತಿದ್ದಂತ ಟ್ರ್ಯಾಕ್ಟರ್ ಗೆ ಲಾರಿಯೊಂದು ಡಿಕ್ಕಿಯೊಡೆದ ಪರಿಣಾಮ, ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ಹುಬ್ಬಳ್ಳಿಯ ಸಮೀಪದ ಬುಡರಸಿಂಗಿ ಕ್ರಾಸ್ ಬಳಿ ನಡೆದಿದೆ.
ಟ್ಯಾಂಕರ್ ಲಾರಿ ಡಿಕ್ಕಿಯೊಡೆದಿದ್ದರಿಂದಾಗಿ ಸ್ಥಳದಲ್ಲಿಯೇ ಬಾಗಲಕೋಟೆ ಜಿಲ್ಲೆಯ ಕಲ್ಮೇಶ ಯಂಕಮ್ಮನವರ ಹಾಗೂ ಹಾವೇರಿ ಜಿಲ್ಲೆಯ ಕಲ್ಮೇಶ ಜಾಧವ ಸಾವನ್ನಪ್ಪಿದ್ದಾರೆ. ಗಾಯಗೊಂಡಂತ ಮುಂಡಗೋಡದ ವಿನಾಯಕ ಮಾನಾಬಾಯಿ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹುಬ್ಬಳ್ಳಿಯ ಬುಡರಸಿಂಗಿ ಕ್ರಾಸ್ ಬಳಿಯಲ್ಲಿ ಟ್ರ್ಯಾಕ್ಟರ್ ಪಂಕ್ಚರ್ ಆಗಿದ್ದರಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿ ಪಂಕ್ಚರ್ ಹಾಕಲಾಗುತ್ತಿತ್ತು. ಈ ವೇಳೆ ಹಾವೇರಿಯಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದಂತ ಟ್ಯಾಂಕರ್ ಲಾರಿಯೊಂದು ಚಾಲಕರ ನಿಯಂತ್ರಣ ತಪ್ಪಿ ಹಿಂಬದಿಯಿಂದ ಡಿಕ್ಕಿಯೊಡೆದಿದೆ.