ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ಪ್ರಕರಣ ಸಂಬಂಧ ಕಸ್ಟಡಿಯಲ್ಲಿರುವ ಪ್ರಮುಖ ಆರೋಪಿ ಮೊಹಮ್ಮದ್ ಆರೀಫ್ ಟರ್ಪಂಟೈನ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಹುಬ್ಬಳ್ಳಿ ಗಲಭೆ ಪ್ರಕರಣ ಸಂಬಂಧ ಬಂಧನದಲ್ಲಿರುವ ಆರೋಪಿ ಮೊಹಮ್ಮದ್ ಆರೀಫ್ ಟರ್ಪಂಟೈನ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಕಾಲಿಗೆ ಗಾಯವಾಗಿದೆ. ಟರ್ಪಂಟೈನ್ ಬೇಕೆಂದು ತರಿಸಿಕೊಂಡು ಟರ್ಪಂಟೈನ್ ಕುಡಿದು ಆತ್ಮಹಯತ್ಯೆಗೆ ಯತ್ನಸಿದ್ದಾನೆ.
ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯ ಜೊತೆಗೆ ಇದ್ದ ಮತ್ತೊಬ್ಬ ಆರೋಪಿ ನಜೀರ್ ಅಹ್ಮದ್ ಹೊನ್ಯಾಳ ಕೂಡಲೇ ಆರೀಫ್ ರಕ್ಷಣೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಪೊಲೀಸರು ಆರೋಪಿ ಮೊಹಮ್ಮದ್ ಆರೀಫ್ ನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.