News Karnataka Kannada
Friday, May 03 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ ಗಲಭೆ ಪ್ರಕರಣ: ಎಐಎಂಐಎಂ ಮುಖಂಡ ಮೊಹಮ್ಮದ್ ಆರೀಫ್ ಬಂಧನ

Photo Credit : IANS

ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಐಎಂಐಎಂ ಮುಖಂಡ ಮೊಹಮ್ಮದ್ ಆರೀಫ್ ನನ್ನು ಗುರುವಾರ ಬಂಧಿಸಿದ್ದಾರೆ. ಗಲಭೆಗೆ ಪ್ರಚೋದನೆ ಹಾಗೂ ಭಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.

ಗಲಭೆಗೆ ಪ್ರಚೋದನೆ ನೀಡಿದ್ದ ಮಾಸ್ಟರ್ ಮೈಂಡ್‌ ಮಂಟೂರ ರಸ್ತೆ ಮಿಲ್ಲತ್ ನಗರದ ಲಾರಿ ಚಾಲಕ, ಮೌಲ್ವಿ ವೇಷಧಾರಿ ಹೈದರಾಬಾದ್ ನಲ್ಲಿ ಅವಿತುಕೊಂಡಿದ್ದಾನೆಂಬ ಮಾಹಿತಿ ಆಧರಿಸಿ ತನಿಖಾ ತಂಡ ಅಲ್ಲಿಗೆ ತೆರಳಿದೆ.

ಈತ ಗಲಭೆ ದಿನ ಸಮಾಜದ ಧರ್ಮ ಗುರುಗಳು ಬರುತ್ತಿದ್ದಾರೆ. ಅಲ್ಲಿಯ ವರೆಗೆ ಇರುತ್ತೇನೆಂದು ಪೊಲೀಸರಿಗೆ ಸುಳ್ಳು ಹೇಳಿ ದಾರಿ ತಪ್ಪಿಸಿ ಗಲಭೆ ಮಾಡಿಸಿದ್ದಾನೆ ಎಂದು ಹೇಳಲಾಗುತ್ತಿದೆ.

ಶನಿವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬುಧವಾರ 11 ಜನರನ್ನು ಬಂಧಿಸಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿ 127 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು