News Karnataka Kannada
Thursday, May 09 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ ಗಲಭೆ ಪ್ರಕರಣ: ಏ.20ರವರೆಗೆ ನಗರದಾದ್ಯಂತ 144 ಸೆಕ್ಷನ್​​ ಜಾರಿ

144 Section
Photo Credit :

ಹುಬ್ಬಳ್ಳಿ: ಏ.20ರವರೆಗೆ ನಗರದಾದ್ಯಂತ ಸಿಆರ್ ಪಿಸಿ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಲಾಭೂರಾಮ ಆದೇಶ ಹೊರಡಿಸಿದ್ದಾರೆ.

ಗಲಭೆ ನಿಯಂತ್ರಿಸುವ ಉದ್ದೇಶದಿಂದ ನಗರದಾದ್ಯಂತ ನಾಲ್ಕು ದಿನ ಏ.16 ರಾತ್ರಿಯಿಂದ ಏ.20ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಗಲಭೆಕೋರರ ಬಂಧನಕ್ಕೆ ಪೊಲೀಸ್ ಆಯುಕ್ತರು 8 ತಂಡ ರಚಿಸಿದ್ದಾರೆ. ಸದ್ಯ ಗಲಭೆಗೆ ಕಾರಣರಾದ ಹತ್ತಕ್ಕೂ ಹೆಚ್ಚು ಜನರನ್ನು ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ.

ಠಾಣೆ ಎದುರು ಸುತ್ತಮುತ್ತ ಬಿದ್ದಿರುವ ಕಲ್ಲಿನ ರಾಶಿಗಳನ್ನು ಪಾಲಕೆಯ ಪೌರ ಕಾರ್ಮಿಕರು ಸ್ವಚ್ಛಗೊಳಿಸುತ್ತಿದ್ದಾರೆ. ಗಲಭೆಕೋರರು ಮೊದಲೇ ಸಂಚು ರೂಪಿಸಿ ರಾಶಿ ಕಲ್ಲು ತಂದಿದ್ದರು ಎಂಬ ಆರೋಪ ಕೇಳಿ ಬಂದಿದ್ದು, ಈ ನಿಟ್ಟಿನಲ್ಲೂ ತನಿಖೆ ಮುಂದುವರಿದಿದೆ.

ನಗರದೆಲ್ಲೆಡೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು