ಹುಬ್ಬಳ್ಳಿ: ಏ.20ರವರೆಗೆ ನಗರದಾದ್ಯಂತ ಸಿಆರ್ ಪಿಸಿ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಲಾಭೂರಾಮ ಆದೇಶ ಹೊರಡಿಸಿದ್ದಾರೆ.
ಗಲಭೆ ನಿಯಂತ್ರಿಸುವ ಉದ್ದೇಶದಿಂದ ನಗರದಾದ್ಯಂತ ನಾಲ್ಕು ದಿನ ಏ.16 ರಾತ್ರಿಯಿಂದ ಏ.20ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಗಲಭೆಕೋರರ ಬಂಧನಕ್ಕೆ ಪೊಲೀಸ್ ಆಯುಕ್ತರು 8 ತಂಡ ರಚಿಸಿದ್ದಾರೆ. ಸದ್ಯ ಗಲಭೆಗೆ ಕಾರಣರಾದ ಹತ್ತಕ್ಕೂ ಹೆಚ್ಚು ಜನರನ್ನು ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ.
ಠಾಣೆ ಎದುರು ಸುತ್ತಮುತ್ತ ಬಿದ್ದಿರುವ ಕಲ್ಲಿನ ರಾಶಿಗಳನ್ನು ಪಾಲಕೆಯ ಪೌರ ಕಾರ್ಮಿಕರು ಸ್ವಚ್ಛಗೊಳಿಸುತ್ತಿದ್ದಾರೆ. ಗಲಭೆಕೋರರು ಮೊದಲೇ ಸಂಚು ರೂಪಿಸಿ ರಾಶಿ ಕಲ್ಲು ತಂದಿದ್ದರು ಎಂಬ ಆರೋಪ ಕೇಳಿ ಬಂದಿದ್ದು, ಈ ನಿಟ್ಟಿನಲ್ಲೂ ತನಿಖೆ ಮುಂದುವರಿದಿದೆ.
ನಗರದೆಲ್ಲೆಡೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.