ಬೆಂಗಳೂರು: ಹುಬ್ಬಳ್ಳಿ – ಧಾರವಾಡ ನಗರದ ಸ್ಥಳೀಯರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಹುಬ್ಬಳ್ಳಿ – ಧಾರವಾಡ ನಗರದಲ್ಲಿ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಶಾಖೆಯನ್ನು ಪ್ರಾರಂಭಿಲು ಅನುಕೂಲವಾಗುವಂತೆ 2022-23ನೇ ಸಾಲಿನ ರಾಜ್ಯದ ಆಯವ್ಯಯದಲ್ಲಿ ಪ್ರತ್ಯೇಕ ಲೆಕ್ಕ ಶೀರ್ಷಿಕೆಯಡಿ ಅನುದಾನವನ್ನು ಮಂಜೂರು ಮಾಡಿ ಬಿಡುಗಡೆಗೊಳಿಸಲು ಅಗತ್ಯ ಕ್ರಮವಹಿಸುವಂತೆ ಮುಖ್ಯಮಂತ್ರಿಗಳಿಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಯವರು ಪತ್ರ ಬರೆದಿದ್ದಾರೆ.
ಬೆಂಗಳೂರಿನ, ಬನ್ನೇರುಘಟ್ಟ ರಸ್ತೆಯ ಶ್ರೀ ಜಯದೇವ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಾಧ್ಯಾಪಕರಾದ ಡಾ.ಸಿ.ಎನ್. ಮಂಜುನಾಥ್ ಅವರು ಹುಬ್ಬಳ್ಳಿ – ಧಾರವಾಡ ನಗರದಲ್ಲಿ ಶ್ರೀ ಜಯದೇವ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಪ್ರಾರಂಭಿಸಲು ಕೋರುತ್ತಾ, ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಬೆಂಗಳೂರಿನಲ್ಲಿ 1050 ಹಾಸಿಗೆ ಹಾಗೂ ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ತಲಾ 600 ಹಾಸಿಗೆಗಳ ಸಾಮರ್ಥ್ಯದ ಶಾಖೆಗಳನ್ನು ಹೊಂದಿ ಸುಸಜ್ಜಿತವಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ.
ಅದೇ ರೀತಿ ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಒಂದು ಶಾಖೆಯನ್ನು ತೆರೆದರೆ ನಗರದ ಸ್ಥಳೀಯರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಸನ್ಮಾನ್ಯ ಸಭಾಪತಿಗಳಿಗೆ ಪತ್ರ ಬರೆದು ತಿಳಿಸಿರುವ ಹಿನ್ನೆಯಲ್ಲಿ, ಸಭಾಪತಿಗಳು, ಹುಬ್ಬಳ್ಳಿ – ಧಾರವಾಡ ನಗರದಲ್ಲಿ ಶ್ರೀ ಜಯದೇವ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಶಾಖೆಯನ್ನು ಆರಂಭಿಸಲು ಅನುಕೂಲವಾಗುವಂತೆ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿರಿಸುವಂತೆ ರಾಜ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…