ಹುಬ್ಬಳ್ಳಿ : ಕರಾವಳಿ ಫಿಷ್ ಲ್ಯಾಂಡ್ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೆ ಇಲ್ಲಿನ 5 ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 52 ಸಾವಿರ ದಂಡ ವಿಧಿಸಿದೆ.ಅಶ್ವಾಕ ಸುತಾರ , ಮಹ್ಮದ್ ಆರೀಫ್ ಐನಾಪುರಿ ಶಿಕ್ಷೆಗೆ ಒಳಗಾದವರು, ಗಿರಿಯಾಲ ರೋಡ್ ಪಕ್ಕಕ್ಕೆ ಇರುವ ಕಾಮರೆಡ್ಡಿ ಕಾಂಪ್ಲೆಕ್ಸ್ನಲ್ಲಿದ್ದ ಕರಾವಳಿ ಫಿಷ್ ಲ್ಯಾಂಡ್ ಹೋಟೆಲ್ ಮಾಲೀಕ ಉದಯ ಮರಕಲ್ ಗಾಯಗೊಂಡಿದ್ದರು.
ಘಟನೆ ಹಿನ್ನೆಲೆ : 2018 ಫೆ . 31 ರಂದು ಹೋಟೆಲ್ನಲ್ಲಿ ವ್ಯಾಪಾರ ಮಾಡುತ್ತಿದ್ದಾಗ ರಾತ್ರಿ 10 ರ ಸುಮಾರಿಗೆ ಬಂದ ಆರೋಪಿತರು ಸರಾಯಿ ಬಾಟಲಿಗೆ ನೀರು ಮಿಕ್ ಮಾಡಲು ಹೋಟೆಲ್ನಲ್ಲಿದ್ದ ನೀರಿನ ಜಗ್ಗು ತೆಗೆದುಕೊಂಡು ಹೋಗಿದ್ದಾರೆ.
ಈ ವೇಳೆ ಉದಯ ಅವರು ಜಗ್ಗನ್ನು ಹೊರಗಡೆ ತೆಗೆದುಕೊಂಡು ಹೋದರೆ ಊಟ ಮಾಡುವವರಿಗೆ ತೊಂದರೆಯಾಗುತ್ತದೆ ಎಂದು ಹೇಳಿದಕ್ಕೆ ಆರೋಪಿತರು ಅವಾಚ್ಯವಾಗಿ ಬೈದಿದ್ದಾರೆ . ನಂತರ ಇದನ್ನು ಪ್ರಶ್ನಿಸಿದಾಗ ಇಬ್ಬರು ಸೇರಿ ಬಟನ್ ಚಾಕುವಿನಿಂದ ಬೆನ್ನು ಮತ್ತು ಬಲಗಡೆ ಪಕ್ಕಡಿಗೆ ಇರಿದು ಕೊಲೆ ಮಾಡಲು ಯತ್ನಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ 5 ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್ . ಗಂಗಾಧರ ಶಿಕ್ಷೆ ವಿಧಿಸಿದ್ದಾರೆ . ಸರಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಸುಮಿತ್ರಾ ಎಂ. ಅಂಚಟಗೇರಿ ವಾದ ಮಂಡಿಸಿದ್ದರು.
ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…
ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…
ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಶಾಸಕರದ್ದು ಎನ್ನಲಾದ…
ಹಿಂದಿ ಕಿರುತೆರೆ ನಟಿ ರೂಪಾಲಿ ಗಂಗೂಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಪ್ರಧಾನಿಯವರ ಕೆಲಸದಿಂದ ಪ್ರಭಾವಿತಳಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು…
ರಾಷ್ಟ್ರ ರಾಜಧಾನಿ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದ ಸುಮಾರು 100 ಶಾಲೆಗಳಿಗೆ ಇ-ಮೇಲ್ ಮೂಲಕ ಒಡ್ಡಲಾದ ಬಾಂಬ್ ಬೆದರಿಕೆ…