ಅಧಿಕ ಪ್ರಮಾಣದಲ್ಲಿ ಆಟೋದಲ್ಲಿ ಪ್ರಯಾಣ : 10 ಆಟೋ ಸೀಜ್

ಹುಬ್ಬಳ್ಳಿ: ನಗರದಲ್ಲಿಂದು ಸಂಚಾರಿ ಪೊಲೀಸರು ಫೀಲ್ಡ್ ಗೆ ಇಳಿದಿದ್ದು, ಖಾಸಗಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ನಿಗದಿತ ಪ್ರಯಾಣಿಕರಿಗಿಂತ ಅಧಿಕ ಪ್ರಮಾಣದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ 10ಕ್ಕೂ ಆಟೋಗಳನ್ನು ಹುಬ್ಬಳ್ಳಿಯ ಉತ್ತರ ಸಂಚಾರಿ ಠಾಣೆಯ ಪೊಲೀಸರು ಸೀಜ್ ಮಾಡಿದ್ದಾರೆ.

ಒಂದು ಆಟೋದಲ್ಲಿ ಮೂರು ಜನರಿಗೆ ಪ್ರಯಾಣ ಮಾಡಲು ಸ್ಥಳಾವಕಾಶ ಇದ್ದರು ಕೂಡಾ ಕೆಲವೊಂದಿಷ್ಟು ಅಟೋ ಚಾಲಕರು 10ಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಶಾಲೆಗೆ ಬಿಡಲು ಹಾಗೂ ಕರೆತರುವ ಕಾರ್ಯವನ್ನು ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ಆಟೋ ಚಾಲಕರಿಗೆ ಸಾಕಷ್ಟು ಬಾರಿ ಈ ರೀತಿಯಾಗಿ ಸಂಚಾರಿ ನಿಯಮ ಉಲ್ಲಂಘನೆ ಮಾಡಬೇಡಿ ಅಂತಾ ತಿಳಿ ಹೇಳಿದರು.  ಕೆಲವೊಂದಿಷ್ಟು ಅಟೋ ಚಾಲಕರು ಕ್ಯಾರೇ ಎಂದಿಲ್ಲ. ಹೀಗಾಗಿ ಇಂದು ಬೆಳ್ಳಂಬೆಳ್ಳಿಗೆ ಹುಬ್ಬಳ್ಳಿಯ ಉತ್ತರ ಸಂಚಾರಿ ಠಾಣೆಯ ಪೊಲೀಸರು ಫೀಲ್ಡ್ ಗೆ ಇಳಿದು ವಿದ್ಯಾ ನಗರ,ಗೋಕುಲ್ ರಸ್ತೆ ಹಾಗೂ ದೇಶಪಾಂಡೆ ನಗರದಲ್ಲಿನ ಖಾಸಗಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಇಳಿಸಲು ಬಂದಿದ್ದ 10ಕ್ಕೂ ಹೆಚ್ಚು ಆಟೋಗಳನ್ನು ಸೀಜ್ ಮಾಡಿದ್ದಾರೆ.

ಇನ್ನು, ಕೇವಲ ಆಟೋ ಚಾಲಕರ ತಪ್ಪು ಮಾತ್ರ ಇದರಲಿಲ್ಲ. ಆಟೋಗಳಲ್ಲಿ ತಮ್ಮ ಮಕ್ಕಳನ್ನು ಕಳಿಸುವ ಪೋಷಕರು ಕೂಡಾ ದುಡ್ಡನ್ನು ಉಳಿಸುವ ಸಲುವಾಗಿ ತಮ್ಮ ಮಕ್ಕಳ ಜೀವದ ಜೊತೆ ಆಟ ಆಡುವ ಕೆಲಸಕ್ಕೆ ಮುಂದಾಗುತ್ತಿದ್ದಾರಾ? ಅಂತಾ ಹಲವು ಅನುಮಾನಗಳು ಇದೀಗ ಮೂಡಿದೆ.

Sneha Gowda

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

10 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

23 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

47 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

1 hour ago