ಹುಬ್ಬಳ್ಳಿ: ಜಿಲ್ಲೆಯಲ್ಲಿ ಇಂದು ಪೊಲೀಸರ ಮುಂದೆಯೇ ಎರಡು ಕುಟುಂಬಗಳು ಮಾರಾಮಾರಿ ಮಾಡಿಕೊಂಡಿರೋ ಘಟನೆ ಶಿವಶಂಕರ ಕಾಲೋನಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ 6 ಜನರು ಗಾಯಗೊಂಡಿದ್ದಾರೆ.
ಹುಬ್ಬಳ್ಳಿಯ ಶಿವಶಂಕರ ಕಾಲೋನಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಅಂಚಟಗೇರಿ ಹಾಗೂ ಕೌದಿ ಕುಟುಂಬಸ್ಥರು ಹೊಡೆದಾಡಿಕೊಂಡಿದ್ದಾರೆ. ಇಟ್ಟಿಗೆ, ಕೋಲು ಹಿಡಿದು ನಡು ರಸ್ತೆಯಲ್ಲೇ ಬಡಿದಾಡಿಕೊಂಡಿದ್ದಾರೆ.
ಹೊಯ್ಸಳ ಪೊಲೀಸರು ಸ್ಥಳದಲ್ಲೇ ಇದ್ದರೂ ಕೌದಿ ಮತ್ತು ಅಂಚಟಗೇರಿ ಕುಟುಂಬಸ್ಥರು ಗಲಾಟೆ ಮಾಡಿಕೊಂಡು ಬಡಿದಾಡಿಕೊಂಡಿದ್ದಾರೆ. ಈ ಘಟನೆಯಲ್ಲಿ ಆರು ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಸದ್ಯ ಇತ್ತಂಡಗಳ ಮೇಲೆ ಕೇಸ್ ದಾಖಲಾಗಿದೆ.