ಹುಬ್ಬಳ್ಳಿ-ಧಾರವಾಡ

24 ಗಂಟೆಯಲ್ಲಿ ಕುಡಿಯುವ ನೀರು ಸರಬರಾಜು ವ್ಯವಸ್ಥೆ: ಶಾಸಕ ವಿನಯ ಕುಲಕರ್ಣಿ

ಧಾರವಾಡ : ಧಾರವಾಡ ತಾಲೂಕು ವ್ಯಾಪ್ತಿಯಲ್ಲಿ ಬರುವ ಧಾರವಾಡ ಗ್ರಾಮೀಣ ಮತ್ತು ಕಲಘಟಗಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ 121 ಗ್ರಾಮಗಳಿಗೆ ಅಗತ್ಯವಿರುವ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳು ಅಗತ್ಯವಿದ್ದಲ್ಲಿ ತಕ್ಷಣ ತಾಕೂಕು ಆಡಳಿತ ಸಂಪರ್ಕಿಸಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಹಾಗೂ ಧಾರವಾಡ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ವಿನಯ ಕುಲಕರ್ಣಿ ಅವರು ತಿಳಿಸಿದರು.

ಅವರು ಕಿತ್ತೂರ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಧಾರವಾಡ ತಾಲೂಕಿನ ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ, ಗ್ರಾಮ ಪಂಚಾಯತ ನೊಡಲ್ ಅಧಿಕಾರಿಗಳೊಂದಿಗೆ ಧಾರವಾಡ ತಾಲೂಕಿನ ಬರ ಪರಿಸ್ಥಿತಿ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ಹಾಗೂ ಟಾಸ್ಕ ಪೊರ್ಸ್ ಜರುಗಿಸಿ, ಮಾತನಾಡಿದರು.

ತಾಲೂಕಿನ ಪ್ರತಿ ಎರಡರಿಂದ ಮೂರು ಗ್ರಾಮ ಪಂಚಾಯತಿಗಳಿಗೆ ತಾಲೂಕು ಮಟ್ಟದ ಒರ್ವ ಅಧಿಕಾರಿಯನ್ನು ಗ್ರಾಮ ಪಂಚಾಯತ ಮಟ್ಟದಲ್ಲಿ ನೊಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಮತ್ತು ಗ್ರಾಮ ಪಂಚಾಯತ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಗ್ರಾಮಮಟ್ಟದ ಟಾಸ್ಕ ಪೊರ್ಸ್ ಸಮಿತಿಗಳನ್ನು ರಚಿಸಲಾಗಿದೆ. ಇವುಗಳ ವರದಿ ಆದಾರದ ಮೇಲೆ ತುರ್ತು ಕ್ರಮ ನಿರ್ವಹಿಸಲಾಗುತ್ತದೆ ಎಂದು ಹೇಳಿದರು.

ಧಾರವಾಡ ಗ್ರಾಮೀಣ ಮತಕ್ಷೇತ್ರ ಹಾಗೂ ಕಲಘಟಗಿ ಮತಕ್ಷೇತ್ರಯ 121 ಹಳ್ಳಿಗಳು ತಾಲೂಕಿನಲ್ಲಿ ಬರುತ್ತವೆ. ಎಲ್ಲ ಹಳ್ಳಿಗಳಿಗೂ ಕುಡಿಯುವ ನೀರಿನ ತೊಂದರೆ ಆಗದಂತೆ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಪ್ರತಿ ಗ್ರಾಮಕ್ಕೆ ಮೂರು ಖಾಸಗಿ ಬೋರವೇಲಗಳನ್ನು ಗುರುತಿಸಿ, ಮಾಲೀಕರೊಂದಿಗೆ ಚರ್ಚಿಸಿ, ಒಪ್ಪಂದ ಮಾಡಿಕೊಳ್ಳಲಾಗಿದೆ.
ಈಗಾಗಲೇ ಫೆಬ್ರವರಿ 1 ರಿಂದ ಧಾರವಾಡ ಗ್ರಾಮೀಣ ವಿಬಾಗದ ಹೊಸಟ್ಟಿ, ಬೇಲೂರ ಮತ್ತು ಕಲಘಟಗಿ ವಿಧಾನ ಸಭಾ ಮತಕ್ಷೆತ್ರ ಮುಗದ ಮತ್ತು ನಿಗದಿ ಗ್ರಮಗಳಿಗೆ ಬಾಡಿಗೆ ಬೋರವೇಲ್ ದಿಂದ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಅವರು ತಿಳಿಸಿದರು.

ತಮ್ಮ ಅಧ್ಯಕ್ಷತೆಯಲ್ಲಿ ಈಗಾಗಲೇ ಮೂರು ತಾಲೂಕುಮಟ್ಟದ ಟಾಸ್ಕ್ ಪೊರ್ಸ್ ಸಭೆಗಳನ್ನು ಜರುಗಿಸಲಾಗಿದ್ದು, ಪ್ರತಿ ಶುಕ್ರವಾರ ಅಥವಾ ಶನಿವಾರದಂದು ಟಾಸ್ಕ್ ಪೊರ್ಸ್ ಸಭೆ ನಡೆಸಲಾಗುತ್ತಿದೆ. ಗ್ರಾಮಮಟ್ಡದ ಟಾಸ್ಕ್ ಪೊರ್ಸ್ ಸಮಿತಿಯನ್ನು ಗ್ರಾಮ ಪಂಚಾಯತ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದು, ಪಿಡಿಓ, ಗ್ರಾಮ ಆಡಳಿತ ಅಧಿಕಾರಿಗಳು ಸದಸ್ಯರಾಗಿದ್ದಾರೆ. ಕುಡಿಯುವ ನೀರು, ಜಾನುವಾರುಗಳಿಗೆ ಅಗತ್ಯವಿರುವ ಮೇವು ಕುರಿತು ಅವರು ಮಾಡುವ ಶಿಪಾರಸ್ಸುಗಳನ್ನು 24. ಗಂಟೆಯಲ್ಲಿ ಈಡೇರಿಸಲಾಗುವುದು ಎಂದು ಶಾಸಕ ವಿನಯ ಕುಲಕರ್ಣಿ ಅವರು ತಿಳಿಸಿದರು.

ಪಶುಪಾಲನೆ ಇಲಾಖೆ ನೀಡಿರುವ ತಾಲೂಕಿನ ಜಾನುವಾರುಗಳ ಸಂಖ್ಯೆ ಮತ್ತು ತಾಲೂಕಿನಲ್ಲಿ ಮೇವು ಲಭ್ಯತೆ ಕುರಿತು ಗ್ರಮವಾರು ಸಮೀಕ್ಷೆ ಮಾಡಲಾಗಿದ್ದು, ಮುಂದಿನ 12 ವಾರುಗಳಿಗೆ ಆಗುವಷ್ಟು ಮೇವು ಲಭ್ಯವಿದೆ. ಆದರೂ ಈಗಾಲೇ ಗರಗ ಹೋಬಳಿಯ ಮಾದನಭಾವಿ, ಧಾರವಾಡ ಹೋಬಳಿಯ ಧಾರವಾಡ ಎಪಿಎಂಸಿ ಮತ್ತು ಅಮ್ಮಿನಭಾವಿ ಹೋಬಳಿಯ ಮರೇವಾಡದಲ್ಲಿ ಸುಮಾರು 10 ಟನ್ ಮೇವು ದಾಸ್ತಾನು ಮಾಡಲಾಗಿದೆ. ರೈತರು ಬೇಡಿಕೆ ಸಲ್ಲಿಸಿದ್ದಲ್ಲಿ ತಕ್ಷಣ ಪೂರೈಸಲಾಗುವುದು. ಕೃಷಿಕರಲ್ಲದ ಜಾನುವಾರು ಸಾಕಾಣಿಕೆದಾರರು ಮತ್ತು ಸಣ್ಣ, ಅತೀ ಸಣ್ಣ ರೈತರು ಮೇವು ಬೇಕು ಎಂದಲ್ಲಿ ನೀಡಲಾಗುವುದು ಎಂದು ಶಾಸಕರು ಸಭೆಯಲ್ಲಿ ತಿಳಿಸಿದರು.

ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಬೇಡಿಕೆಗೆ ಅನುಗುಣವಾಗಿ ನರೇಗಾ ಕೂಲಿ ನೀಡಲಾಗುತ್ತಿದೆ. ಬರಗಾಲ ಹಿನ್ನಲೆಯಲ್ಲಿ ನೂರು ದಿನಗಳ ಬದಲಾಗಿ ನೂರೈವತ್ತು ದಿಗಳ ವರೆಗೆ ನರೇಗಾ ಕೂಲಿ ಕೆಲಸ ನೀಡಲು ಕ್ರಮವಹಿಸಲಾಗಿದೆ. ಮತ್ತು ಜನರು ಉದ್ಯೋಗ ಅರಸಿ, ಗುಳೆ ಹೋಗದಂತೆ ಅವರ ಬೇಡಿಕೆಗಳಿಗೆ ಸ್ಪಂದಿಸಿ, ಮುನ್ನೆಚ್ಚರಿಕೆ ವಹಿಸಲಾಗಿದೆ. ಅಧಿಕಾರಿಗಳು ತಮ್ಮ ಕೆಲಸದ ಸ್ಥಳಗಳಲ್ಲಿ ಇದ್ದು, ಜನರ ಬೇಕು ಬೇಡಿಕೆಗಳನ್ನು ಗಮನಿಸಿ, ಸ್ಪಂದಿಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಸಹಾಯವಾಣಿ ಆರಂಭ; ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಅಗತ್ಯವಿದ್ದಲ್ಲಿ ಸಾರ್ವಜನಿಕರು ಸಂಪರ್ಕಿಸಲು ಧಾರವಾಡ ತಹಶಿಲ್ದಾರ ಕಚೇರಿಯಲ್ಲಿ ಸಹಾಯವಾಣಿ –
0836 22333822 ಆರಂಭಿಸಲಾಗಿದೆ. ದಿನದ 24 ಗಂಟೆ ಸಹಾಯವಾಣಿ ಕರೆ ಸ್ವೀಕರಿಸಲು ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಸಾರ್ವಜನಿಕರು ಅಗತ್ಯವಿದ್ದಲ್ಲಿ ಕರೆ ಮಾಡಿ, ತಿಳಿಸಿಬಹುದು ಎಂದು ಶಾಸಕರು ತಿಳಿಸಿದರು.

ಸಭೆಯಲ್ಲಿ ಧಾರವಾಡ ತಹಶಿಲ್ದಾರ ಡಾ.ಡಿ.ಎಚ್.ಹೂಗಾರ, ಧಾರವಾಡ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾವಿ, ನರೇಗಾ ಯೋಜನೆಯ ತಾಲೂಕು ಸಹಾಯಕ ನಿರ್ದೇಶಕ ಚಂದ್ರು ಪೂಜಾರ ಸೇರಿದಂತೆ ಕೃಷಿ, ತೋಟಗಾರಿಗೆ, ಪಶುಸಂಗೋಪನೆ, ಕಂದಾಯ ಇಲಾಖೆಗಳ ತಾಲೂಕುಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ ನೊಡಲ್ ಅಧಿಕಾರಿಗಳು, ಉಪತಹಸಿಲ್ದಾರರು, ಕಂದಾಯ ನಿರೀಕ್ಷಕರು ಸಭೆಯಲ್ಲಿ ಭಾಗವಹಿಸಿದ್ದರು.

Nisarga K

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago