News Karnataka Kannada
Saturday, May 11 2024
ಹುಬ್ಬಳ್ಳಿ-ಧಾರವಾಡ

ಮತ್ತೊಂದು ಸುತ್ತಿನ ಹೋರಾಟಕ್ಕೆ ಅಣಿಯಾದ ಜಯಮೃತ್ಯುಂಜಯ ಸ್ವಾಮೀಜಿ

Swamij
Photo Credit : News Kannada

ಧಾರವಾಡ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗದೆ ಹೋದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡೂ ರಾಷ್ಟ್ರೀಯ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಯಲಿವೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ನಾವು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದೇವೆ. ಕಳೆದ ಸರ್ಕಾರ ಕೊನೆ ಘಳಿಗೆಯಲ್ಲಿ ನಮಗೆ 2ಡಿ ಮೀಸಲಾತಿ ನೀಡಿತು. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದು ಆದೇಶ ಪತ್ರ ನಮ್ಮ ಕೈ ಸೇರಲೇ ಇಲ್ಲ. ಈಗ ಹೊಸ ಸರ್ಕಾರ ಬಂದಿದೆ. ನಮ್ಮ ಸಮಾಜದ ಶಾಸಕರು, ಸಚಿವರು ಮೀಸಲಾತಿಗಾಗಿ ಮತ್ತೆ ಸಿಎಂ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಾರೆ.

ಆದರೆ, ಸಿದ್ದರಾಮಯ್ಯನವರು ಬಜೆಟ್ ಅಧಿವೇಶನ ಮುಗಿದ ಮೇಲೆ ನಮ್ಮ ಸಮಾಜದ ಮುಖಂಡರ ಸಭೆ ಕರೆಯುವುದಾಗಿ ಹೇಳಿ ಇಂದಿಗೂ ಸಭೆ ಕರೆದಿಲ್ಲ. ಇದರಿಂದಾಗಿ ಮತ್ತೆ ನಾವು ಹೋರಾಟ ಆರಂಭಿಸಿದ್ದೇವೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಸರ್ಕಾರದ ಗಮನಸೆಳೆದಿದ್ದೇವೆ ಎಂದರು.

ಬೆಳಗಾವಿಯಲ್ಲೇ ನಮ್ಮ ಸಮಾಜದ ಮುಖಂಡರ ಸಭೆ ಕರೆದು ಮೀಸಲಾತಿ ವಿಚಾರವಾಗಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಿಎಂ ಅವರ ಮೇಲೆ ಒತ್ತಡ ಹಾಕುತ್ತಿದ್ದೇವೆ. ಆದರೆ, ಸಿಎಂ ಅವರು ಮತ್ತೆ ಈಗ ಅಧಿವೇಶನ ಮುಗಿದ ಮೇಲೆ ಮಾತನಾಡೋಣ ಎನ್ನುತ್ತಿದ್ದಾರೆ. ಇಲ್ಲೇ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಿ ಎಂದು ಪರಿ ಪರಿಯಾಗಿ ಬೇಡಿಕೊಂಡರೂ ಅಧಿವೇಶನ ಮುಗಿದ ಮೇಲೆ ಬೆಂಗಳೂರಿನಲ್ಲೇ ಸಭೆ ಕರೆಯುತ್ತೇನೆ ಎಂದಿದ್ದಾರೆ.

ಸಿಎಂ ಅವರ ಈ ನಕಾರಾತ್ಮಕ ಸ್ಪಂದನೆ ವಿರುದ್ಧ ನಾವು ಇದೇ ಡಿ.13 ರಂದು ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ಸಿಎಂ ಅವರ ನಿರ್ಲಕ್ಷ್ಯ ಧೋರಣೆಯಿಂದಾಗಿ ಈ ಹೋರಾಟ ಹಮ್ಮಿಕೊಂಡಿದ್ದೇವೆ. ರಾಣಿ ಚೆನ್ನಮ್ಮ ವೃತ್ತದಿಂದ ಸುವರ್ಣಸೌಧಕ್ಕೆ ನಮ್ಮ ಪ್ರತಿಭಟನೆ ಹೋಗಲಿದೆ. ಸಾಧ್ಯವಾದರೆ ಸುವರ್ಣಸೌಧದ ಮುಂದೆ ಇರುವ ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಎದುರು ಧರಣಿ ಸಹ ಕುಳಿತುಕೊಳ್ಳಲಿದ್ದೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು