News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ 3 ದಿನ ಅವಕಾಶ

3-day window for installation of Ganesh idols at Idgah maidan
Photo Credit : News Kannada

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆಗೆ ಜಯ ಸಿಕ್ಕಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಬಿಜೆಪಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರು ಹಾಗೂ ಹಿಂದೂ ಸಂಘಟನೆಗಳು ನಿರಂತರ ಈದ್ಧಾ ಮೈದಾನದಲ್ಲಿ ಗಣೇಶ್ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.

ಈಗ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅನುಮತಿ ನೀಡಿದ್ದಾರೆ. ಮೂರು ದಿನಗಳ ಪ್ರತಿಷ್ಠಾಪನೆಗೆ ಅವಕಾಶ ನೀಡಿದ್ದು, 19,20,21 ರಂದು ಮೂರು ದಿನಗಳ ಕಾಲ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಿದ್ದಾರೆ. ಅನುಮತಿ ನೀಡುತ್ತಿದ್ದಂತೆ ಹೋರಾಟಗಾರರು ಜಯಕಾರ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಇನ್ನು, ಈದ್ಲಾ ಮೈದಾನದಲ್ಲಿ ಗಣೇಶ್ ಪ್ರತಿಷ್ಠಾಪನೆ ವಿರೋಧಿಸಿ 24 ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಕಳೆದ ವರ್ಷದಂತೆ ಈ ವರ್ಷವೂ ಅನುಮತಿ ನೀಡಿದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದವು. ಅಲ್ಲದೇ, ಅಂಜುಮನ್ ಇಸ್ಲಾಂ ಸಂಸ್ಥೆ ಧಾರವಾಡ ಹೈಕೋರ್ಟ್‌ಗೆ ಮೊರೆ ಹೋಗಿತ್ತು. ಇಂದು ಧಾರವಾಡ ಹೈಕೋರ್ಟ್‌ ಅರ್ಜಿಯನ್ನು ವಜಾ ಮಾಡಿದೆ.

ಸೆಪ್ಟೆಂಬರ್ 19 ರಂದು ಬೆಳಿಗ್ಗೆ 6 ಗಂಟೆಯಿಂದ 21 ರಂದು ಮಧ್ಯಾಹ್ನ 12 ಗಂಟೆಯವರೆಗೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಿದೆ. 30*30 ಅಳತೆಯ ಪೆಂಡಾಲ, ಗಣೇಶ ಉತ್ಸವದ ಹೊರತಾಗಿ ಯಾವುದೇ ಬಾವುಟ, ಬಿತ್ತಿಪತ್ರ, ವಿವಾದಿತ ಫೋಟೋ ಪ್ರದರ್ಶನ ನಿಷೇಧ ಮಾಡಲಾಗಿದೆ. ಮನರಂಜನಾ ಕಾರ್ಯಕ್ರಮಗಳಿಗೂ ನಿಷೇಧ ವಿಧಿಸಲಾಗಿದೆ. ಅನಾವಶ್ಯಕ ಗಲಭೆ, ಗಲಾಟೆಗಳು ಆದ್ರೆ ಆಯೋಜಕರೆ ಹೊಣೆಯಾಗ್ತಾರೆ. ಅನ್ಯಧರ್ಮೀಯರಿಗೆ ಭಾವನೆಗಳಿಗೆ ಧಕ್ಕೆ ತರುವಂತಿಲ್ಲ, ಪ್ರಚೋದನಕಾರಿ ಹೇಳಿಕೆ, ಭಾಷಣ ನಿಷೇಧ ಸೇರಿದಂತೆ 18 ಷರತ್ತುಗಳನ್ನು ವಿಧಿಸಿ ಮಹಾನಗರ ಪಾಲಿಕೆ ಅನುಮತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು