ಹುಬ್ಬಳ್ಳಿ : ವಾಕಿಂಗ್ ಮಾಡಲು ಹೋಗಿದ್ದ ಪೊಲೀಸ್ ಕಾನಸ್ಟೇಬಲ್ ಒಬ್ಬರು ವಾಪಾಸ್ ಮನೆಗೆ ಬಾರದೇ ಕಾಣೆಯಾಗಿರುವ ಘಟನೆ ಏಪ್ರಿಲ್ 24 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಶರೀಫ್’ಸಾಬ ಬೆನ್ನೂರ (52) ಕಾಣೆಯಾದ ಹೆಡ್ ಕಾನಸ್ಟೇಬಲ್ ಆಗಿದ್ದು, ಇವರು ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಾರವಾರ ರಸ್ತೆಯ ಪೊಲೀಸ್ ಕ್ವಾಟರ್ಸ್ ನಲ್ಲಿದ್ದ ನಿವಾಸದಿಂದ ಎಂದಿನಂತೆ ಬೆಳಿಗ್ಗೆ ವಾಕಿಂಗ್’ಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ಮರಳಿ ಮನೆಗೆ ಬಾರದೇ ಕಾಣೆಯಾಗಿದ್ದಾರೆ.
ಕಾಣೆಯಾದ ಶರೀಫ್’ಸಾಬ ಕುರಿತು ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದರು ಸಹ ಈವರೆಗೆ ಸುಳಿವು ಸಿಕ್ಕಿಲ್ಲ. ಹೀಗಾಗಿ, ಉಪನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯ ಪ್ರಕರಣ ದಾಖಲಿಸಿದ್ದಾರೆ.