News Karnataka Kannada
Friday, May 03 2024
ಹುಬ್ಬಳ್ಳಿ-ಧಾರವಾಡ

ಕರ್ನಾಟಕದಲ್ಲಿಯೂ ಖಾತೆ ತೆಗೆಯಲು ಆಪ್ ಭರ್ಜರಿ ಪ್ಲಾನ್: ಹುಬ್ಬಳ್ಳಿಗೆ ಕೇಜ್ರಿವಾಲ್‌, ಮಾನ್‌

Aap plans to open accounts in Karnataka too, arrives in Hubballi late at night
Photo Credit : News Kannada

ಹುಬ್ಬಳ್ಳಿ: ಕರ್ನಾಟಕದಲ್ಲಿಯೂ ಆಮ್ ಆದ್ಮ ಪಕ್ಷ ಖಾತೆ ತೆರೆಯಲು ಪ್ರಯತ್ನ ಮುಂದುವರೆಸಿದೆ. ವಿಧಾನ ಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷ ಸಂಘಟನೆಗೆ ಆಪ್ ಸಖತ್ ಪ್ಲಾನ್ ರೂಪಿಸಿದೆ. ಹೀಗಾಗಿ ತಡರಾತ್ರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅರವಿಂದ ಕೇಜ್ರಿವಾಲ್, ಭಗವಂತ ಮಾನ್ ಬಂದಿಳಿದಿದ್ದಾರೆ.

ಇದೇ ಮೊದಲ ಬಾರಿಗೆ ಆಗಮಿಸಿದ ಉಭಯ ನಾಯಕರಿಗೆ ವಾಣಿಜ್ಯನಗರಿಗೆ ಆಪ್ ನಾಯಕರು ಅದ್ದೂರಿಯಾಗಿ ಸ್ವಾಗತ ನೀಡಿದರು. ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು 10 ಗಂಟೆಗೆ ಹುಬ್ಬಳ್ಳಿಯಿಂದ ದಾವಣಗೆರೆಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ.

2023 ರ ವಿಧಾನಸಭಾ ಚುನಾವಣೆಯನ್ನು ಆಪ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಕ್ಕೆ ಅರವಿಂದ ಕೇಜಿವಾಲ್ ಗ್ರಾಂಡ್ ಎಂಟ್ರಿ ಕೊಟ್ಟಿದ್ದಾರೆ. ಕರ್ನಾಟಕದ ಮಧ್ಯ ಭಾಗದಿಂದಲೇ ಪಕ್ಷ ಸಂಘಟನೆಗೆ ಅರವಿಂದ ಕೇಜ್ರಿವಾಲ್ ಮುಂದಾಗಿದ್ದಾರೆ. ದಾವಣಗೆರೆಯಲ್ಲಿ ನಡೆಯುವ ಬ್ಲಾಕ್ ಸದಸ್ಯರ ಪ್ರಮಾಣ ವಚನದ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಅವರು, ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ.

ದಾವಣಗೆರೆ ಕಾರ್ಯಕ್ರಮಕ್ಕೂ ಮುಂಚೆ ಹುಬ್ಬಳ್ಳಿಯಲ್ಲಿ ಸಭೆ ನಡೆಸಲಿರುವ ಕೇಜಿವಾಲ್ ಪಕ್ಷದ ಮುಖಂಡರು ಮತ್ತು ಟಿಕೆಟ್ ಆಕಾಂಕ್ಷಿಗಳ ಜೊತೆಗೆ ಖಾಸಗಿ ಹೋಟೆಲ್‌ನಲ್ಲಿ ಚರ್ಚೆ ನಡೆಸಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಖಾತೆ ಓಪನ್ ಮಾಡಲು ಮಾಸ್ಟರ್ ಪ್ಲಾನ್ ಮಾಡಿದ್ದು ಇಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಮುಂಬರುವ ಚುನಾವಣೆಯಲ್ಲಿ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಲು ಚಿಂತನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು