ಹುಬ್ಬಳ್ಳಿ: ಒಂದೂವರೆ ವರ್ಷದ ಮಗು ಆಕಾಶ್ ಅಂತ್ಯಸಂಸ್ಕಾರದ ವೇಳೆ ಅಚ್ಚರಿ ಎಂಬಂತೆ ಜೀವಂತವಾಗಿತ್ತು, ಆದರೆ ಇದೀಗ ಮೃತಪಟ್ಟಿದೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬಸಾಪುರ ಗ್ರಾಮದ ಒಂದೂವರೆ ವರ್ಷದ ಆಕಾಶ್ ಬಸವರಾಜ ಪೂಜಾರ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ. ಈತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಮ್ಸ್ ವೈದ್ಯರು ಆತನಿಗೆ ಸೂಕ್ತ ಚಿಕಿತ್ಸೆ ನೀಡಿದ್ದರು. ಆದ್ರೆ ಬಾಲಕನ ಪೋಷಕರು ಏಕಾಏಕಿಯಾಗಿ ಡಿಸ್ಟಾರ್ಜ್ ಮಾಡಿಸಿಕೊಂಡು ಹೋಗಿದ್ದರು.
ಆಗ ಗ್ರಾಮಸ್ಥರು ಮಗುವನ್ನು ಈ ಪರಿಸ್ಥಿತಿಯಲ್ಲಿ ಕರೆದುಕೊಂಡು ಬಂದಿದ್ದು ಸರಿಯಲ್ಲ ಎಂದು ಹೇಳಿದ್ದರು. ಆಗ ಮತ್ತೆ ನವಲಗುಂದ ಆಸ್ಪತ್ರೆಗೆ ದಾಖಲಿಸಿ ಮತ್ತೆ ಕಿಮ್ಸ್ ಅಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಶನಿವಾರ ಬೆಳಗ್ಗೆ ಮತ್ತೆ ಪೋಷಕರು ತಮ್ಮ ಮಗು ಬದುಕಲ್ಲ ಎಂದು ಅರಿತು ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದಾಗ ಮನೆಯಲ್ಲಿಯೇ ಮಗು ಮೃತಪಟ್ಟಿದ್ದು, ಗ್ರಾಮದಲ್ಲಿ ಅಂತ್ಯಸಂಸ್ಥಾರ ನಡೆಸಲಾಯಿತು.