News Karnataka Kannada
Sunday, May 05 2024
ಹುಬ್ಬಳ್ಳಿ-ಧಾರವಾಡ

ಕೇಂದ್ರ ಸರಕಾರದ ವಿಶೇಷ ಪ್ರಶಸ್ತಿ ಪಡೆದ ಕರ್ನಾಟಕದ ಏಕೈಕ ಪಟ್ಟಣ ಪಂಚಾಯತಿ ಅಳ್ನಾವರ

Alnavar is the only town panchayat in Karnataka to receive a special award from the central government
Photo Credit : News Kannada

ಧಾರವಾಡ: ಕೇಂದ್ರ ಸರಕಾರದ ವಸತಿ ಮತ್ತು ನಗರ ವ್ಯವಹಾರ ಮಂತ್ರಾಲಯವು ನವದೆಹಲಿಯ ಹೆಬಿಟೇಟ್ ಸೆಂಟರ್ ದಲ್ಲಿರುವ ನ್ಯಾಷನಲ್ ಅರ್ಬನ್ ಕಾನ್ ಕ್ಲೇವ್ ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ನಗರ ಕಲಿಕಾ ವೇದಿಕೆಯಲ್ಲಿನ ಸಮಾರಂಭದಲ್ಲಿ ಇಂದು ಬೆಳಿಗ್ಗೆ ಲೋಕಲ್ ಸಲ್ಯೂಷನ್ ಇನ್ ರಿಜಿನಲ್ ಲ್ಯಾಂಗ್ವೇಜ್ ಪ್ರವರ್ಗದಲ್ಲಿ ದಿನದ 24 ಗಂಟೆ ನೀರು ಪೂರೈಸುವ ಯೋಜನೆ ಯಶಸ್ವಿ ಅನುಷ್ಠಾನಕ್ಕಾಗಿ ಅಳ್ನಾವರ ಪಟ್ಟಣ ಪಂಚಾಯತಿಗೆ ವಿಶೇಷ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಯಿತು.

ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಕುನಾಲ್ ಕುಮಾರ್, ಯುನಿಸೆಫ್ ಸೋಶಿಯಲ್ ಪಾಲಿಸಿ ಮುಖ್ಯಸ್ಥ ಹ್ಯೂನ್ ಹಿ ಬನ್, ಎನ್.ಡಿ.ಎಮ್.ಸಿ. ನಿರ್ದೇಶಕ ಮತ್ತು ಹಣಕಾಸು ಸಲಹೆಗಾರ ಪುಷ್ಕಲ್ ಉಪಾಧ್ಯಯ ಅವರು ಇಂದಿನ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಅಳ್ನಾವರ ಪಟ್ಟಣ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಅಳ್ನಾವರ ತಹಸಿಲ್ದಾರ ಬಸವರಾಜ್ ಬೆಣ್ಣಿಶಿರೂರ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ರಮೇಶ್ ಬಿ.ಎಸ್. ಹಾಗೂ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪ್ರಕಾಶ್ ಮಗದುಮ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಅಳ್ನಾವರ ಪಟ್ಟಣ ಪಂಚಾಯಿತಿಯು ಈ ಪ್ರಶಸ್ತಿಯನ್ನು ಪಡೆದ ಕರ್ನಾಟಕದ ಏಕೈಕ ಪಟ್ಟಣ ಪಂಚಾಯಿತಿಯಾಗಿದೆ. ಇದು ರಾಷ್ಟ್ರೀಯ ಮಟ್ಟದಲ್ಲಿ ಧಾರವಾಡ ಜಿಲ್ಲೆಗೆ ಸಂದ ಗೌರವವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು