ಹುಬ್ಬಳ್ಳಿ: ಅಮಿತ್ ಶಾ ಅವರು ಇಂದು ಸಂಜೆ ಆರಕ್ಕೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ನಮ್ಮ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಮತ್ತು ಇತರೇ ಪ್ರಮುಖ ಜೊತೆಗೆ ಸಭೆ ನಡೆಯಲಿದೆ. ಗದಗ, ಧಾರವಾಡ, ಹಾವೇರಿ ಜಿಲ್ಲೆಯ ಪ್ರಮುಖರ ಜೊತೆ ಸಭೆ ಆಗುವುದು. ಸದ್ಯದ ಚುನಾವಣಾ ಮಾಹಿತಿಯನ್ನು ಶಾ ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಇನ್ನೂ ಕ್ಷಮೆ ಕೇಳಿಲ್ಲ. ಅವರ ಕೂಡಲೇ ಕ್ಷಮೆಯಾಚಿಸಿಬೇಕು. ಅವರು ತಮ್ಮ ಹೇಳಿಕೆ ಸಮರ್ಥನೆ ಮಾಡಿಕೊಳ್ಳುತ್ತಾರೆ. ಅವರ ವಿರುದ್ಧ ಚುನಾವಣಾ ಆಯೋಗಕ್ಕೂ ಸಹ ದೂರು ಸಲ್ಲಿಕೆಯಾಗುತ್ತಿವೆ. ಮುಂಬೈ ಕರ್ನಾಟಕ ಭಾಗದಲ್ಲಿ ನಮ್ಮ ಸ್ಟ್ರೈಕ್ ರೇಟ್ ಜಾಸ್ತಿ ಇದೆ.
ಅದು ಮತ್ತೆ ಮುಂದುವರಿಯಲಿದೆ. ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ಲೀಡ್ ನಿಂದ ನಾವು ಗೆಲ್ಲುತ್ತೇವೆ. ಕಿತ್ತೂರು ಭಾಗದಲ್ಲಿ ಮೋದಿ ಕಾರ್ಯಕ್ರಮ ನಿಗದಿಯಾಗಿದೆ. ಅದರ ಬಗ್ಗೆ ಮುಂದೆ ಮಾಹಿತಿ ನೀಡಲಾಗುವುದು. ಯೋಗಿ ಆದಿತ್ಯನಾಥ್ ಮತ್ತು ರಾಜನಾಥ್ ಸಿಂಗ್ ಸಹ ಬರಲಿದ್ದಾರೆ. ಮೋದಿ ಕಾರ್ಯಕ್ರಮ ಇನ್ನೂ ಎರಡು ರಿಂದ ಮೂರು ಜಾಸ್ತಿ ಮಾಡುವಂತೆ ಮನವಿ ಮಾಡಿದ್ದವೆ. ಪ್ರಮುಖ ನಾಯಕರು 224 ಕ್ಷೇತ್ರಗಳಿಗೆ ಭೇಟಿ ಕೊಡಲು ನಿರ್ಧಾರ ಮಾಡಿದ್ದೇವೆ ಎಂದರು.