ಹುಬ್ಬಳ್ಳಿ : ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆಯ ರಾಜ್ಯ ಸಚಿವ ಅರ್ಜುನರಾಮ್ ಮೇಘವಾಲ್ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಅವರ ನಿವಾಸಕ್ಕೆ ತೆರಳಿ ಕುಶಲೋಪರಿ ಹಂಚಿಕೊಂಡರು. ತಮ್ಮ ನಿವಾಸಕ್ಕೆ ಆಗಮಿಸಿದ ನ್ಯಾಯ ಖಾತೆ ಸಚಿವರನ್ನು ಪ್ರಹ್ಲಾದ ಜೋಶಿ ಆದರದಿಂದ ಬರಮಾಡಿಕೊಂಡರು.
ಪರಸ್ಪರ ಸಂತಸ ವ್ಯಕ್ತಪಡಿಸಿದ ಉಭಯ ಸಚಿವರು ಕೆಲ ಸಮಯ ಪ್ರಸ್ತುತ ಸನ್ನಿವೇಶದ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಉಂಟಾದ ಘಟನೆಗಳ ಬಗ್ಗೆ ಪ್ರಸ್ತಾಪಿಸಿದರು.
ಚುನಾವಣಾ ಸಿದ್ಧತೆ, ಪ್ರಚಾರ, ಜನರ ಅಭಿಮತ, ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಅಮಿತ್ ಶಾ ಅವರು ನಡೆಸಿದ ಪ್ರಚಾರ ಸಭೆಗಳಲ್ಲಿ ಕಂಡುಬಂದ ಜನ ಬೆಂಬಲ ಕುರಿತು ಪರಸ್ಪರ ಅಭಿಪ್ರಾಯ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾಜಿ ಸಚಿವ, ಉದ್ಯಮಿ ಮುರುಗೇಶ ನಿರಾಣಿ ಜತೆಗಿದ್ದರು