ಹುಬ್ಬಳ್ಳಿ : ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆಯ ರಾಜ್ಯ ಸಚಿವ ಅರ್ಜುನರಾಮ್ ಮೇಘವಾಲ್ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಅವರ ನಿವಾಸಕ್ಕೆ ತೆರಳಿ ಕುಶಲೋಪರಿ ಹಂಚಿಕೊಂಡರು. ತಮ್ಮ ನಿವಾಸಕ್ಕೆ ಆಗಮಿಸಿದ ನ್ಯಾಯ ಖಾತೆ ಸಚಿವರನ್ನು ಪ್ರಹ್ಲಾದ ಜೋಶಿ ಆದರದಿಂದ ಬರಮಾಡಿಕೊಂಡರು.
ಪರಸ್ಪರ ಸಂತಸ ವ್ಯಕ್ತಪಡಿಸಿದ ಉಭಯ ಸಚಿವರು ಕೆಲ ಸಮಯ ಪ್ರಸ್ತುತ ಸನ್ನಿವೇಶದ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಉಂಟಾದ ಘಟನೆಗಳ ಬಗ್ಗೆ ಪ್ರಸ್ತಾಪಿಸಿದರು.
ಚುನಾವಣಾ ಸಿದ್ಧತೆ, ಪ್ರಚಾರ, ಜನರ ಅಭಿಮತ, ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಅಮಿತ್ ಶಾ ಅವರು ನಡೆಸಿದ ಪ್ರಚಾರ ಸಭೆಗಳಲ್ಲಿ ಕಂಡುಬಂದ ಜನ ಬೆಂಬಲ ಕುರಿತು ಪರಸ್ಪರ ಅಭಿಪ್ರಾಯ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾಜಿ ಸಚಿವ, ಉದ್ಯಮಿ ಮುರುಗೇಶ ನಿರಾಣಿ ಜತೆಗಿದ್ದರು
ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…
ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…
ಇಲ್ಲಿನ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…
ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ. ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…
ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್ ಸ್ಲಾಯ್ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್ನಲ್ಲಿ ಅವರು…
ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್ಐಟಿಯವರು ಬಂಧಿಸುತ್ತಿಲ್ಲ. ಎಂದು…