ಅಣ್ಣಿಗೇರಿ: ಉಡುಪಿಯ ಕಾಲೇಜಿನಲ್ಲಿ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಹಿಂದೂ ಯುವತಿಯ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಶಾಸಕ ಅರವಿಂದ್ ಬೆಲ್ಲದ ಅವರು ಮಾಧ್ಯಮ ಜೊತೆ ಮಾತನಾಡಿದ ಸಂದರ್ಭದಲ್ಲಿ ಮತಕ್ಕಾಗಿ ಓಲೈಕೆಯ ರಾಜಕಾರಣ ಮಾಡುತ್ತಿದೆ ಎಂದು ಮಾಧ್ಯಮದ ಜೊತೆ ಮಾತನಾಡಿದರು.
ಈ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಮಾಧ್ಯಮದವರಿಗೆ ಪ್ರಶ್ನೆಗೆ ಉತ್ತರಿಸಿ , ಶಾಸಕ ಅರವಿಂದ ಬೆಲ್ಲದ ಅವರು ರಾಜಕೀಯದಲ್ಲಿ ಈಗ ತಾನೇ ಅಂಬೆಗಾಲು ಇಟ್ಟು ನಡೆಯುತ್ತಿದ್ದಾರೆ. ಅವರು ನಡೆಯಲಿಕ್ಕೆ ಪ್ರಾರಂಭವಾದ ಮೇಲೆ ಇಂಥ ಹೇಳಿಕೆಗಳನ್ನು ನೀಡಲಿ ಎಂದು ಹೇಳಿದರು.