ಹುಬ್ಬಳ್ಳಿ: ಆಟೋದಲ್ಲಿ ಬಿಟ್ಟು ಹೋಗಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿಯನ್ನು ವಾಪಸ್ ನೀಡಿ ಆಟೋ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಹುಬ್ಬಳ್ಳಿಯಲ್ಲಿ ನಾಗರಾಜ್ ಎಂಬವರು ಪ್ರಾಮಾಣಿಕತೆ ಮೆರೆದ ವ್ಯಕ್ತಿ.
ಇವರ ಆಟೋದಲ್ಲಿ ಮೂವರು ಗೋಕುಲ ಬಸ್ ನಿಲ್ದಾಣದಿಂದ ಹೊಸುರ ಬಸ್ ನಿಲ್ದಾಣದ ವರೆಗೆ ಪ್ರಯಾಣ ಮಾಡಿದ್ದರು. ಆಟೋ ಇಳಿಯುವಾಗ ಬ್ಯಾಗ್ ಆಟೋದಲ್ಲಿ ಬಿಟ್ಟು ಹೋಗಿದ್ದರು.
ಬ್ಯಾಗ್ನಲ್ಲಿ 4 ತೊಲೆ ಬಂಗಾರ, 16 ತೊಲೆ ಬೆಳ್ಳಿ ಹಾಗೂ ಮನೆಯ ದಾಖಲಾತಿಗಳು ಇದ್ದವು. ಧಾರವಾಡದ ನಿಸ್ಸಾಮುದ್ದೀನ್ ಕಾಲೊನಿ ಮಹಿಳೆ ಬ್ಯಾಗ್ ಬಿಟ್ಟು ಹೋಗಿದ್ರು. ಇದನ್ನು ಗಮನಿಸಿದ ಆಟೋ ಚಾಲಕ, ಪ್ರಯಾಣಿಕರನ್ನು ಗುರುತಿಸಿ ಬ್ಯಾಗ್ನ್ನು ವಾಪಸ್ ನೀಡಿದ್ದಾರೆ.
ಹುಬ್ಬಳ್ಳಿಯ ಗೋಕುಲ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಇತರೆ ಆಟೋ ಚಾಲಕರ ಸಮ್ಮುಖದಲ್ಲಿ ಪ್ರಯಾಣಿಕರಿಗೆ ಆಟೋ ಚಾಲಕ ನಾಗರಾಜ್ ಬ್ಯಾಗ್ನ್ನು ಹಿಂದಿರುಗಿಸಿದ್ದಾರೆ.
ಆಟೋ ಚಾಲಕನ ಪ್ರಾಮಾಣಿಕತೆ ಮೆಚ್ಚಿ ಪೊಲೀಸರು ಸನ್ಮಾನಿಸಿದ್ದಾರೆ.