News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ಹಿಟ್ ಆ್ಯಂಡ್ ರನ್ ಕಾನೂನು ಹಿಂಪಡೆಯುವಂತೆ ಆಟೋ ರಿಕ್ಷಾ ಚಾಲಕರಿಂದ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಹಿಟ್ ಆ್ಯಂಡ್ ರನ್ ಕಾನೂನು ಹಿಂಪಡೆಯುವುದು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಆಟೋ ರಿಕ್ಷಾ ಚಾಲಕರು ಬೃಹತ್‌ ಪ್ರತಿಭಟನೆ ನಡೆಸಿದರು.
Photo Credit : News Kannada

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಹಿಟ್ ಆ್ಯಂಡ್ ರನ್ ಕಾನೂನು ಹಿಂಪಡೆಯುವುದು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಆಟೋ ರಿಕ್ಷಾ ಚಾಲಕರು ಬೃಹತ್‌ ಪ್ರತಿಭಟನೆ ನಡೆಸಿದರು.

ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸುರಕ್ಷಾ ಸಂಘ ಹಾಗೂ ದಿ. ಲಕ್ಷ್ಮಣ ಹಿರೇಕೇರೂರ ಆಟೋ ಚಾಲಕರ ಸಂಘದ ಸಹಯೋಗದಲ್ಲಿ ಸ್ಟೇಷನ್ ರಸ್ತೆಯ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯಿಂದ ನೂರಾರು ಆಟೋ ಚಾಲಕರು ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಆಟೋ ರಿಕ್ಷಾ ಚಾಲಕರಿಗೆ ಕಾರ್ಮಿಕ ಕಾರ್ಡ್ ವಿತರಣೆ ಮಾಡಬೇಕು, ಹೆಚ್’ಎಸ್’ಆ‌ರ್’ಪಿ ನಂಬ‌ರ್ ಪ್ಲೇಟ್ ದರವನ್ನು ಕಡಿತಗೊಳಿಸಬೇಕು, ಇಲ್ಲವೇ ಉಚಿತವಾಗಿ ವಿತರಣೆ ಮಾಡಬೇಕು. ಆಟೋ ರಿಕ್ಷಾ ಚಾಲಕರಿಗೆ ಪ್ರತ್ಯೇಕ ನಿಗಮ ಮಂಡಳಿ ರಚನೆ ಮಾಡಬೇಕು, ಚಾಲಕರ ದಿನ ಆಚರಣೆಯನ್ನು ಸರ್ಕಾರ ಘೋಷಣೆ ಮಾಡಬೇಕು. ಆಟೋ ರಿಕ್ಷಾ ಚಾಲಕರ ಮಕ್ಕಳಿಗೆ ಉನ್ನತ ಮಟ್ಟದ ವಿದ್ಯಾರ್ಥಿ ವೇತನ ನೀಡಬೇಕು, ಆಟೋ ಚಾಲಕರು ಅಪಘಾತದಲ್ಲಿ ಮರಣ ಹೊಂದಿದರೆ 5 ಲಕ್ಷ ಪರಿಹಾರ ಬದಲಾಗಿ 10 ಲಕ್ಷ ನೀಡಬೇಕು. ಆಟೋ ರಿಕ್ಷಾ ವಿಮೆಯನ್ನು ಕಡಿಮೆಗೊಳಿಸಬೇಕು, ಹು-ಧಾ ಅವಳಿನಗರದಲ್ಲಿ ಅಧಿಕೃತ ಆಟೋ ನಿಲ್ದಾಣಗಳನ್ನು ನಿರ್ಮಿಸಿ ಕೊಡಬೇಕು, 60 ವರ್ಷ ಮೇಲ್ಪಟ್ಟ ಆಟೋ ರಿಕ್ಷಾ ಚಾಲಕರಿಗೆ ಪಿಂಚಣಿ ಯೋಜನೆ ಜಾರಿಗೊಳಿಸುವುದು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು. ಬಳಿಕ ತಹಶೀಲ್ದಾ‌ರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು