ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ತಪ್ಪಿದ ಭಾರಿ ದುರಂತ

ಹುಬ್ಬಳ್ಳಿ: ಯುವಕನೊಬ್ಬ ಅತಿ ಜೋರಾಗಿ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ವಿದ್ಯುತ್ ತಂತಿಗಳು ಕಾರಿನ ಮೇಲೆ ಬಿದ್ದರು ಕೂಡಾ ಕಾರಿನಲ್ಲಿದ್ದ 4 ಜನ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ತಡರಾತ್ರಿ ವಿದ್ಯಾನಗರದಲ್ಲಿ ನಡೆದಿದೆ.

ವಿದ್ಯಾನಗರದ ಸೆವೆನ್ ಬೀನ್ಸ್ ಹೋಟೆಲ್ ಬಳಿಯಲ್ಲಿ ರಾತ್ರಿ ಸುಮಾರಿಗೆ 4 ಜನ ಯುವಕರು ಕಿಯಾ ಕಾರನ್ನು ವಿದ್ಯಾನಗರದಲ್ಲಿ ಅತಿ ಜೋರಾಗಿ ಚಾಲನೆ ಮಾಡಿಕೊಂಡು ಬರುತ್ತಿದ್ದರು. ಆದರೆ ಏಕಾಏಕಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ವಿದ್ಯುತ್ ಕಂಬ ತುಂಡಾಗಿ ಕಾರಿನ ಮೇಲೆ ಬಿದ್ದಿದೆ. ಆದರೆ ಕಾರಿನಲ್ಲಿದ್ದವರ ಪುಣ್ಯವೋ ಅಥವಾ ಆ ಸಂದರ್ಭದಲ್ಲಿ ಆ ರಸ್ತೆಯಲ್ಲಿ ಬೇರೆ ವಾಹನಗಳು ಹಾಗೂ ಪಾದಚಾರಿಗಳು ಇಲ್ಲದ ಕಾರಣ ನಡೆಯಬಹುದಾದ ದೊಡ್ಡ ದುರಂತ ತಪ್ಪಿದೆ.

ಅಪಘಾತ ಆಗುತ್ತಿದ್ದ ಹಾಗೆ ಕಾರಿನಲ್ಲಿದ್ದ ನಾಲ್ಕು ಜನ ಕಾರನ್ನು ಬಿಟ್ಟು ಪರಾರಿಯಾಗಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಮರದಲ್ಲಿ ಸಿಲುಕಿಕೊಂಡ ಕಾರನ್ನು ತೆರವು ಗೊಳಿಸಿ ಉತ್ತರ ಸಂಚಾರಿ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ. ಈ ಪ್ರಕರಣ ದಾಖಲು ಮಾಡಿಕೊಂಡು ಅಪಘಾತ ಮಾಡಿ ಕಾರು ಬಿಟ್ಟು ಹೋಗಿರುವ ಯುವಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago